Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Wednesday, August 26, 2015

ಕೊಪ್ಪಳ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳು
1)  ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ. 184/2015 ಕಲಂ  78(3) Karnataka Police Act.
ದಿನಾಂಕ. 25-08-2015 ರಂದು ಅಗಳಕೇರಾ ಗ್ರಾಮದಲ್ಲಿ ಗ್ರಾಮ ಪಂಚಾಯತ ಮುಂದೆ ಹುಲಗಿ ಗಂಗಾವತಿ ರಸ್ತೆಯ ಮೇಲೆ  ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆದಿದೆ ಅಂತಾ ಮಾಹಿತಿ ಬಂದ ಮೇರೆಗೆ ಶ್ರೀ. ಜಯಪ್ರಕಾಶ ಪಿ.ಎಸ್.ಐ. ಮುನಿರಾಬಾದ ಸಿಬ್ಬಂದಿಯವರನ್ನು ಕರೆದುಕೊಂಡು ಸ್ಥಳಕ್ಕೆ ಹೋಗಿ ದಾಳಿ ಮಾಡಿ ಆರೋಪಿತನಿಂದ ಜೂಜಾಟದ ಸಾಮಗ್ರಿಗಳಾದ ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ ಪೆನ್ನು ಹಾಗೂ ಜೂಜಾಟದ ನಗದು ಹಣ. 905=00 ರೂ. ಗಳನ್ನು ಜಪ್ತ ಮಾಡಿಕೊಂಡು ಠಾಣೆಗೆ ಬಂದು ಫಿರ್ಯಾದಿ ನೀಡಿದ್ದರ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತಪಾಸಣೆ ಕೈಕೊಮಂಡಿದ್ದು ಇರುತ್ತದೆ.
2)  ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ. 197/2015 ಕಲಂ  78(3) Karnataka Police Act.
ಇಂದು ದಿನಾಂಕ: 25-08-2015 ರಂದು ರಾತ್ರಿ 8-30 ಗಂಟೆಗೆ ಶ್ರೀ ಇ.ಕಾಳಿಕೃಷ್ಣ, ಪೊಲೀಸ್ ಇನ್ಸಪೆಕ್ಟರ್ ಗಂಗಾವತಿ ನಗರ ಪೊಲೀಸ್ ಠಾಣೆ ಇವರು ಒಬ್ಬ ಆರೋಪಿತನೊಂದಿಗೆ ಮೂಲ ಪಂಚನಾಮೆ, ಮುದ್ದೆಮಾಲು ಹಾಗೂ ವರದಿಯನ್ನು ಸಲ್ಲಿಸಿದ್ದು  ಸದರಿ ವರದಿಯ ಸಾರಂಶವೇನೆಂದರೆ, ಇಂದು ದಿನಾಂಕ 25-08-2015  ರಂದು 19-00 ಗಂಟೆಗೆ ಆರೋಪಿತನಾದ (01) ದ್ಯಾವಣ್ಣ ತಂದೆ ಯಂಕಪ್ಪ  ಈತನು ಗಂಗಾವತಿ ನಗರದ ಗೌಸಿಯಾ ಕಾಲೋನಿಯ ಜುಮ್ಮಾ ಮಸೀಧಿ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರನ್ನು ಕರೆದು 01 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಕೂಗುತ್ತಾ ಸಾರ್ವಜನಿಕರಿಂದ ಹಣವನ್ನು ಪಡೆದುಕೊಂಡು ಅವರಿಗೆ ಮಟಕಾ ನಂಬರ ಬರೆದ ಚೀಟಿ ಬರೆದುಕೊಡುತ್ತಿರುವಾಗ ಸದರಿ ವ್ಯಕ್ತಿಯ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಹಿಡಿದು ಆರೋಪಿ ದ್ಯಾವಣ್ಣ ತಂದೆ ಯಂಕಪ್ಪ  ಈತನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ ನಗದು ಹಣ ರೂ. 450-00. (02) ಮಟಕಾ ನಂಬರ ಬರೆದ ಒಂದು ಚೀಟಿ. (03) ಒಂದು ಬಾಲ್ ಪೆನ್ನು ಹಾಗೂ (04) ಒಂದು ನೋಕಿಯಾ ಕಂಪನಿಯ ಮೊಬೈಲ್ ದೊರೆತಿರುತ್ತದೆ. ಸದರಿ ಮುದ್ದೇಮಾಲನ್ನು ಜಪ್ತಿ ಪಡಿಸಿದ ಬಗ್ಗೆ 7-00 ಪಿ.ಎಂ. ದಿಂದ 8-00 ಪಿ.ಎಂ.ದ ವರೆಗೆ ಪಂಚನಾಮೆಯನ್ನು ಬರೆದುಕೊಂಡು ಸದರಿಯವರ ಮೇಲೆ ಕ್ರಮ ಜರುಗಿಸಬೇಕೆಂದು ವರದಿ ನೀಡಿದ್ದು.  ಸದರಿ ಕೃತ್ಯವು ಕಲಂ: 78(III) ಕೆ.ಪಿ.ಆ್ಯಕ್ಟ್ ಅಡಿಯಲ್ಲಿ ಬರುತ್ತಿದ್ದು, ಸದರಿ ಅಪರಾಧವು ಅಸಂಜ್ಞೆಯ ಅಪರಾಧವಾಗಿದ್ದರಿಂದ ಈ ಬಗ್ಗೆ ಪ್ರಕರಣ ದಾಖಲಿಸಲು ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
3) ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ. 192/2015 ಕಲಂ. 78(3) Karnataka Police Act.
ದಿನಾಂಕಃ-25-08-2015 ರಂದು ರಾತ್ರಿ 20-30 ಗಂಟೆಗೆ ಶ್ರೀ ನಿಂಗಪ್ಪ ಪಿ.ಎಸ್.ಐ ಕಾರಟಗಿ ಠಾಣೆ ಇವರು ಇವರು ಠಾಣೆಗೆ ಹಾಜರಾಗಿ ಮಟ್ಕಾ ಜೂಜಾಟದ ಮೂಲ ಪಂಚನಾಮೆ ಮತ್ತು ವರದಿಯನ್ನು ಹಾಜರುಪಡಿಸಿದ್ದು ಇದರ ಸಾರಾಂಶವೆನಂದರೆ ಇಂದು ದಿನಾಂಕಃ-25-08-2015 ರಂದು ಮಾಹಿತಿಯ ಪ್ರಕಾರ ಮಾನ್ಯ ಪಿ.ಎಸ್.ಐ ಸಾಹೇಭರು ಮತ್ತು ಸಿಬ್ಬಂದಿಯವರು ಮೈಲಾಪೂರ ಗ್ರಾಮಕ್ಕೆ ಹೋಗಿ ಮೈಲಾಪೂರ ಗ್ರಾಮದಲ್ಲಿರು ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ರಾತ್ರಿ 6-35 ಗಂಟೆಯ ಸುಮಾರಿಗೆ ಸಾರ್ವಜನಿಕರಿಗೆ ಮೋಸ ಮಾಡಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ 1) Doddanagouda S/o Ayyanagouda Malipatil Age- 56, R/o Mailapura 2) Shankarappa s/o Basanna Adapura age-60 R/o Mailapura tq- Gangavati 3)Sharanappa @ Sanna Sharanappa s/o Hire Iranna Idiger Age- 30 R/o Mailapura tq- Gangavati ಇವರ ಮೇಲೆ ಪಂಚರ ಸಮಕ್ಷದಲ್ಲಿ ದಾಳಿ ಮಾಡಿ ಹಿಡಿದು ಸಿಕ್ಕ ಆರೋಪಿತರಿಂದ ಮಟ್ಕಾ ಜೂಜಾಟದ ನಗದು ಹಣ ರೂ. 7010/- ಗಳನ್ನು ಮತ್ತು ಮಟ್ಕಾ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಸದರಿ ಆರೋಪಿತರು ತಾವು ಬರೆದ ಮಟ್ಕಾ ಪಟ್ಟಿ ಮತ್ತು ಹಣವನ್ನು ಮಲಾಪೂರ ಗ್ರಾಮದ ಲಕ್ಷಪ ತನಿಗೆ ಕೊಡುವುದಾಗಿ ತಿಳಿಸಿರುತ್ತಾನೆ ಅಂತಾ ಮುಂತಾಗಿ ಇದ್ದ ಮೂಲ ಪಂಚನಾಮೆ ಮತ್ತು ವರದಿಯನ್ನು ನೀಡಿದ ಆಧಾರದ ಮೇಲಿಂದ ಠಾಣೆಯಲ್ಲಿ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡೆನು.
4) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 272/2015 ಕಲಂ. 78(3) Karnataka Police Act & 420 IPC.

ದಿನಾಂಕ: 25-08-2015 ರಂದು ರಾತ್ರಿ 11:30 ಗಂಟೆಗೆ ಶ್ರೀ ಆಂಜನೇಯ ಡಿ.ಎಸ್. ಪಿ.ಎಸ್.ಐ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆ ಇವರು ಒಬ್ಬ ಆರೋಪಿತನೊಂದಿಗೆ ಮೂಲ ಪಂಚನಾಮೆ, ಮುದ್ದೆಮಾಲು ಹಾಗೂ ವರದಿಯನ್ನು ಸಲ್ಲಿಸಿದ್ದು ಅದರ ಸಾರಾಂಶ ಈ ಪ್ರಕಾರ ಇದೆ. ಇಂದು ದಿನಾಂಕ: 25-08-2015 ರಂದು ಮಾನ್ಯ ಡಿ.ಎಸ್.ಪಿ. ಸಾಹೇಬರು ಗಂಗಾವತಿ ಇವರ ಮಾರ್ಗದರ್ಶನದಲ್ಲಿ ಮರಳಿ ಗ್ರಾಮದಲ್ಲಿ ದ್ಯಾಮವ್ವನ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕರಿಂದ ಹಣವನ್ನು ಪಡೆದುಕೊಂಡು ಅವರಿಗೆ ಮೋಸ ಮಾಡುವ ಉದ್ದೇಶದಿಂದ ಮಟಕಾ ಜೂಟಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತವಾದ ಬಾತ್ಮಿ ಬಂದ ಮೇರೆಗೆ ಇಬ್ಬರು ಪಂಚರ ಸಮಕ್ಷಮದಲ್ಲಿ ನಾನು ಮತ್ತು ಸಿಬ್ಬಂದಿಯವರಾದ ಪಿಸಿ 100, 293 287, 195 ಹಾಗೂ ಎ.ಪಿ.ಸಿ. ಬಾಸ್ಕರ ರವರೊಂದಿಗೆ ಸರಕಾರಿ ಜೀಪ್ ನಂ: ಕೆ.ಎ-37/ಜಿ-262 ನೇದ್ದರಲ್ಲಿ ಠಾಣೆಯಿಂದ ಸಂಜೆ 7:30 ಗಂಟೆಗೆ ರಾಯಚೂರ ರಸ್ತೆಯ ಮಾರ್ಗವಾಗಿ ಮರಳಿ ಕಡೆಗೆ ಹೋಗಿ ಊರ ಹೊರಗೆ ಜೀಪನ್ನು ನಿಲ್ಲಿಸಿ ಎಲ್ಲರೂ ಕೂಡಿ ನಡೆದುಕೊಂಡು ಹೋಗಿ ದ್ಯಾಮವ್ವನ ಗುಡಿ ಹತ್ತಿ ಕತ್ತಲ ಮರೆಯಲ್ಲಿ ನಿಂತು ನೋಡಲಾಗಿ ಅಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ 1 ರೂಪಾಯಿಗೆ 80 ರೂಪಾಯಿ ನಸೀಬದ ಮಟಕಾ ಜೂಜಾಟ ಅಂತಾ ಕೂಗುತ್ತಾ ಮಟಕಾ ನಂಬರುಗಳನ್ನು ಬರೆದುಕೊಡುತ್ತಿದ್ದು ಆಗ ಸಮಯ ರಾತ್ರಿ 8:00 ಗಂಟೆಯಾಗಿದ್ದು ಕೂಡಲೇ ದಾಳಿ ಮಾಡಲು ಮಟಕಾ ನಂಬರ್ ಬರೆದುಕೊಡುತ್ತಿದ್ದ ವ್ಯಕ್ತಿಯು ಸಿಕ್ಕಿಬಿದ್ದಿದ್ದು ಅವನ ಹೆಸರು ವಿಚಾರಿಸಲು ದುರುಗಪ್ಪ ತಂದೆ ಅಮಾಜೆಪ್ಪ ವಯಸ್ಸು: 52 ವರ್ಷ ಜಾತಿ: ನಾಯಕ, ಸಾ: ಮರಳಿ ಅಂತಾ ತಿಳಿಸಿದ್ದು ಅವನ ಅಂಗ ಜಡ್ತಿ ಮಾಡಲಾಗಿ ಮಟಕಾ ಜೂಜಾಟದ ನಗದು ಹಣ 1640-00 ರೂ, ಮಟಕಾ ಸಾಮಾಗ್ರಿ ದೊರೆತಿದ್ದು ಸದರಿ ಪಟ್ಟಿಯನ್ನು ಯಾರಿಗೆ ಕೊಡುತ್ತೀ ಅಂತಾ ವಿಚಾರಿಸಲು ತಾನೇ ಇಟ್ಟುಕೊಳ್ಳುವದಾಗಿ ತಿಳಿಸಿದ್ದರಿಂದ ದಾಳಿಯಲ್ಲಿ ಸಿಕ್ಕ ವ್ಯಕ್ತಿ ಹಾಗೂ ಮುದ್ದೆಮಾಲನ್ನು ವಶಕ್ಕೆ ತಗೆದುಕೊಂಡು ಈ ಬಗ್ಗೆ ರಾತ್ರಿ 8:00 ಗಂಟೆಯಿಂದ 9:00 ಗಂಟೆಯವರಗೆ ಸ್ಥಳದಲ್ಲಿಯೇ ನಿರ್ವಹಿಸಿ ಆರೋಪಿತನೊಂದಿಗೆ ವಾಪಸ್ಸು ಠಾಣೆಗೆ ಬಂದು ವರದಿಯನ್ನು ಸಲ್ಲಿಸಿದ್ದು ಇರುತ್ತದೆಅಂತಾ ಮುಂತಾಗಿ ಸಾರಾಂಶ  ಮೇಲಿಂದ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇದೆ.

0 comments:

 
Will Smith Visitors
Since 01/02/2008