Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Saturday, August 8, 2015

ಕೊಪ್ಪಳ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳು
1) ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ ನಂ. 152/2015  ಕಲಂ 78(3) Karnataka Police Act.
ದಿ:07-08-2015 ರಂದು 6-10 ಪಿ.ಎಂ. ಕ್ಕೆ ಶ್ರೀ ಅಶೋಕ .ಎಸ್. ನಗರ ಠಾಣೆ ಕೊಪ್ಪಳ ರವರು ಠಾಣೆಗೆ ಹಾಝರಾಗಿ ನೀಡಿದ ಗಣಕೀಕರಣ ಮಾಡಿದ ಪಿರ್ಯಾಧಿಯನ್ನು ಹಾಜರು ಪಡಿಸಿದ್ದು ಸದರಿ ದೂರು ಅಸಂಜ್ಞೆಯ ಪ್ರಕರಣ ವಾಗಿದ್ದರಿಂದ ಸದರಿ ದೂರನ್ನು ದಾಖಲಿಸಿ ತನಿಖೆ ಕೈಗೊಳ್ಳಲು ಮಾನ್ಯ ನ್ಯಾಯಾಲಯಕ್ಕೆ ಯಾದಿ ಮೂಲಕ ವಿನಂತಿಸಿ ಅನುಮತಿ ಪಡೆದುಕೊಂಡಿದ್ದು, ಸದರಿ ದೂರಿನ ಸಾರಾಂಶವೇನೆಂದರೆ ದಿ: 07-08-2015 ರಂದು 05-00 ಪಿ.ಎಮ್ ಕ್ಕೆ ಕೊಪ್ಪಳ  ನಗರದ ಬಸವೇಶ್ವ ಸರ್ಕಲ್ ಹತ್ತಿರದ ವಿಜಯ ಬ್ಯಾಂಕ್ ರಸ್ತೆಯಲ್ಲಿ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಗವಿಸಿದ್ದಪ್ಪ ತಂದೆ ದೇವಪ್ಪ ಮಸ್ಕಿ : 34 ಜಾ : ದೇವಾಂಗ : ಆಟೋ ಚಾಲಕ ಸಾ : ಬನ್ನಿಕಟ್ಟಿ ಏರಿಯಾ ಕೊಪ್ಪಳ ಈತನು ಸಾವರ್ಜನಿರಿಗೆ 1=00 ರೂಪಾಯಿಗೆ 80=00 ರೂಪಾಯಿ ಯಾರ ಅದೃಷ್ಟ ಹಣ ಹಚ್ಚಿರಿ ಅಂತಾ ಕೂಗುತ್ತಾ .ಸಿ. ಮಟಕಾ ನಂಬರ್ ಬರೆದುಕೊಡುತ್ತಿದ್ದಾಗ ದಾಳಿ ಮಾಡಿ ಹಿಡಿದು ಆರೋಪಿತನಿಂದ 1] 2120=00 ಮಟಕಾ ಜೂಜಾಟದ ನಗದು ಹಣ, 2] ಒಂದು ಮಟಕಾ ಅಂಕಿ ಸಂಖ್ಯೆ ಬರೆದ ಪಟ್ಟಿ ಹಾಗೂ 3] ಒಂದು ಬಾಲ್ ಪೆನ್ನು. ಇವುಗಳನ್ನು ಪಂಚರ ಸಮಕ್ಷಮ ಜಪ್ತಿ ಮಾಡಿಕೊಂಡಿದ್ದು ಇರುತ್ತದೆ. ಸದರಿ ಆರೋಪಿತನು ತಾನು ಬರೆದ ಮಟಕಾ ಪಟ್ಟಿಯನ್ನು ಆರೋಪಿ ಸುಧಾಕರ ಹೊಸಮನಿ ಸಾ : ಸಜ್ಜಿ ಓಣ್ಣಿ ಕೊಪ್ಪಳ ಇತನಿಗೆ ಕೊಡುವುದಾಗಿ ತಿಳಿಸಿದ್ದು ಇರುತ್ತದೆ. ಕಾರಣ ಸದರಿ ಆರೋಪಿತರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಫಿರ್ಯಾದಿಯ ಮೇಲಿಂದ ಮಾನ್ಯ ನ್ಯಾಯಾಲಯದ ಅನುಮತಿಯನ್ನು  ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಅದೆ.
2) ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ ನಂ. 153/2015  ಕಲಂ 78(3) Karnataka Police Act.
ದಿನಾಂಕ: 07-08-2015 ರಂದು ರಾತ್ರಿ 7-30 ಗಂಟೆಗೆ ಫಿರ್ಯಾದಿದಾರರಾದ ಶ್ರೀ ಅಮರೆಗೌಡ ಎ.ಎಸ್.ಐ ನಗರ ಪೊಲೀಸ್ ಠಾಣೆ ಕೊಪ್ಪಳ ನಗರ ಠಾಣೆ ಇವರು ಠಾಣೆಗೆ ಹಾಜರಾಗಿ ನೀಡಿದ ಗಣಕೀಕೃತ ಪಿರ್ಯಾದಿಯ ಸಾರಾಂಶವೇನೆಂದರೆ. ದಿ: 07-08-2015 ರಂದು ಸಂಜೆ 5-20 ಗಂಟೆಗೆ ಕೊಪ್ಪಳ ನಗರದ ಗವಿಮಠದ ಹಿಂದಿನ ಕೆರೆಯ ದಂಡೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನ ರಾಜಶೇಖರಪ್ಪ ತಂದೆ ಅಂದಪ್ಪ ಕೊಪ್ಪಳದ ವಯಾ: 50 ವರ್ಷ ಜಾ: ಪಂಚಮಸಾಲಿ ಉ: ಕೂಲಿ ಕೆಲಸ ಸಾ: ಕುವೆಂಪು ನಗರ, ಕೊಪ್ಪಳ ಈತನು ಜನರ ಗುಂಪಿನಲ್ಲಿ ನಿಂತುಕೊಂಡು ಜನರಿಗೆ ಯಾರ ಅದೃಷ್ಟ ನಸೀಬದ ಜೂಜಾಟ 1-00 ರೂಪಾಯಿಗೆ 80-00 ರೂಪಾಯಿ ಬರುತ್ತದೆ. ಅಂತಾ ಕೂಗುತ್ತಾ ಹಣ ಪಡೆದುಕೊಳ್ಳುತ್ತಿದ್ದು, ಮಟಕಾ ನಂಬರಗಳ ಚೀಟಿ ಬರೆದುಕೊಡುತ್ತಿರುವ ಕಾಲಕ್ಕೆ ಪಂಚರು ಮತ್ತು ಸಿಬ್ಬಂದಿಯವರೊಂದಿಗೆ ಸಂಜೆ 5-50 ಗಂಟೆಯ ವೇಳೆಗೆ ದಾಳಿ ಮಾಡಿದಾಗ ಆರೋಪಿ ರಾಜಶೇಖರಪ್ಪ ತಂದೆ ಅಂದಪ್ಪ ಕೊಪ್ಪಳದ ಇತನು ಸಿಕ್ಕಿದ್ದು ಇತನಿಂದ 1] 1510=00 ರೂ. ನಗದು ಹಣ. 2] ಒಂದು ಬಾಲ್ಪೆನ್. ಅಂಕಿ ಇಲ್ಲಾ. 3] ಒಂದು ಮಟಕಾ ಅಂಕಿ ಸಂಖ್ಯೆ ಬರೆದ ಪಟ್ಟಿ ಇವುಗಳನ್ನು ಪಂಚರ ಸಮಕ್ಷಮ ಜಪ್ತಿ ಮಾಡಿಕೊಂಡಿದ್ದು, ಮಟಕಾ ಬರೆದ ಹಣ ಹಾಗೂ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತಿಯಾ ಅಂತಾ ವಿಚಾರಿಸಿದಾಗ ಗವಿಸಿದ್ದಪ್ಪ ಸಾ: ದೇವರಾಜ ಅರಸ್ ಕಾಲೋನಿ ಕೊಪ್ಪಳ ಇವರಿಗೆ ಕೊಡುವುದಾಗಿ ತಿಳಿಸಿರುತ್ತಾನೆ. ನಂತರ ವಾಪಸ ಠಾಣೆಗೆ ಬಂದು ಆರೋಪಿ, ಮುದ್ದೇಮಾಲು, ಮೂಲ ಪಂಚನಾಮೆ ಮತ್ತು ಫಿರ್ಯಾದಿಯನ್ನು ಹಾಜರಪಡಿಸಿದ ಮೇರೆಗೆ ಸದರಿ ಆರೋಪಿತನ ಮೇಲೆ   ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ.  
3) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 242/2015  ಕಲಂ 78(3) Karnataka Police Act & 420 IPC.
ದಿನಾಂಕ:- 07-08-2015 ರಂದು ಸಂಜೆ 4:00 ಗಂಟೆಗೆ ಶ್ರೀ ಹನುಮರಡ್ಡೆಪ್ಪ, ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆರವರು ಕರ್ನಾಟಕ ರಾಜ್ಯ ಪೊಲೀಸ್ ಪರವಾಗಿ ಸ್ವಂತ ಫಿರ್ಯಾದಿಯನ್ನು ಸಲ್ಲಿಸಿ ಮೂಲ ಪಂಚನಾಮೆ, ಮುದ್ದೇಮಾಲು ಮತ್ತು ಆರೋಪಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶ ಈ ಪ್ರಕಾರ ಇದೆ." ಇಂದು ದಿನಾಂಕ:- 07-08-2015 ರಂದು ಮಧ್ಯಾಹ್ನ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಜೀರಾಳಕಲ್ಗುಡಿ ಗ್ರಾಮದ ತುಂಗಭದ್ರ ಎಡದಂಡೆ ಮೇನ್ ಕೆನಾಲ್ 25 ನೇ ಡಿಸ್ಟ್ರಿಬ್ಯೂಟರಿ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಪಿ.ಸಿ. 160, 129 ಎ.ಪಿ.ಸಿ. 77 ಇವರು ಮತ್ತು ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ನಂ: ಕೆ.ಎ-37/ ಜಿ-307 ನೇದ್ದರಲ್ಲಿ ಠಾಣೆಯಿಂದ ಮಧ್ಯಾಹ್ನ 2:00 ಗಂಟೆಗೆ ಹೊರಟು ಜೀರಾಳ ಕಲ್ಗುಡಿ ಗ್ರಾಮದ ಊರ ಮುಂದೆ ಜೀಪನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಅಲ್ಲಿ 25 ನೇ ಡಿಸ್ಟ್ರಿಬ್ಯೂಟರಿ ಕಾಲುವೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿಯು ಕುಳಿತುಕೊಂಡು ಜನರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಗೆ 1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ, ಅದೃಷ್ಟದ ಮಟಕಾ ನಂಬರಗಳಿಗೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗುತ್ತಾ ಜನರನ್ನು ಕರೆದು ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಮೋಸದ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಮಧ್ಯಾಹ್ನ 2:30 ಗಂಟೆಯಾಗಿದ್ದು ಕೂಡಲೇ ಅವರ ದಾಳಿ ಮಾಡಲಾಗಿ ಮಟಕಾ ಜೂಜಾಟದಲ್ಲಿ ತೊಡಗಿದ್ದವನು ಸಿಕ್ಕಿ ಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕಿಬಿದ್ದವನನ್ನು ವಿಚಾರಿಸಲಾಗಿ ಅವನು ತನ್ನ ಹೆಸರು ಯೂಸೂಫ್ ಅಹ್ಮದ್ ಖಾನ್ ತಂದೆ ಅಮೀನುದ್ದೀನ್ ಖಾನ್, ವಯಸ್ಸು 50 ವರ್ಷ, ಜಾತಿ: ಮುಸ್ಲೀಂ ಉ: ಒಕ್ಕಲುತನ ಸಾ: ಜೀರಾಳ ಕಲ್ಗುಡಿ ತಾ: ಗಂಗಾವತಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 4,100/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ ಪೆನ್ನು ದೊರೆತಿದ್ದು ಇದೆ. ನಂತರ ಅವನಿಗೆ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತೀಯಾ ? ಅಂತಾ ವಿಚಾರಿಸಲು ಮಟಕಾ ಪಟ್ಟಿಯನ್ನು ತಾನೇ ಇಟ್ಟುಕೊಳ್ಳುವುದಾಗಿ ತಿಳಿಸಿದನು. ಈ ಬಗ್ಗೆ ಮಧ್ಯಾಹ್ನ 2:30 ರಿಂದ 3:30 ಗಂಟೆಯವರೆಗೆ ಸ್ಥಳದಲ್ಲಿಯೇ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತನೊಂದಿಗೆ ಠಾಣೆಗೆ ವಾಪಸ್ ಬಂದಿದ್ದು, ಸದರಿ ಆರೋಪಿತನ ವಿರುದ್ಧ ಕಲಂ 78(iii) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ." ಅಂತಾ ಇದ್ದ ದೂರಿನ ಆಧಾರದ ಮೇಲಿಂದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 242/2015 ಕಲಂ 78(iii) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ದಾಖಲು ಮಾಡಿ ತನಿಖೆ ಕೈಗೊಳ್ಳಲಾಯಿತು.
4) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 243/2015  ಕಲಂ 78(3) Karnataka Police Act & 420 IPC.
ದಿನಾಂಕ:-07-08-2015 ರಂದು ಸಂಜೆ 5:30 ಗಂಟೆಗೆ ಶ್ರೀ ಟಿ.ಜಿ. ನಾಗರಾಜ, ಎ.ಎಸ್.ಐ.. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆರವರು ಕರ್ನಾಟಕ ರಾಜ್ಯ ಪೊಲೀಸ್ ಪರವಾಗಿ ಸ್ವಂತ ಫಿರ್ಯಾದಿಯನ್ನು ಸಲ್ಲಿಸಿ ಮೂಲ ಪಂಚನಾಮೆ, ಮುದ್ದೇಮಾಲು ಮತ್ತು ಆರೋಪಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶ ಈ ಪ್ರಕಾರ ಇದೆ. "  ಇಂದು ದಿನಾಂಕ:- 07-08-2015 ರಂದು ಮಧ್ಯಾಹ್ನ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಆನೇಗುಂದಿ ಗ್ರಾಮದ ಗಾಳೆಮ್ಮನ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಪಿ.ಸಿ. 287 ಎ.ಪಿ.ಸಿ. ಮಹಿಬೂಬ ಇವರು ಮತ್ತು ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ನಂ: ಕೆ.ಎ-37/ ಜಿ-200 ನೇದ್ದರಲ್ಲಿ ಠಾಣೆಯಿಂದ ಮಧ್ಯಾಹ್ನ 3:30 ಗಂಟೆಗೆ ಹೊರಟು ಆನೇಗುಂದಿ ಗ್ರಾಮದ ಊರ ಮುಂದೆ ಜೀಪ್ನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಅಲ್ಲಿ ಗಾಳೆಮ್ಮಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿಯು ಕುಳಿತುಕೊಂಡು ಜನರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಗೆ 1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ, ಅದೃಷ್ಟದ ಮಟಕಾ ನಂಬರ್ಗಳಿಗೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗುತ್ತಾ ಜನರನ್ನು ಕರೆದು ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಮೋಸದ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಸಂಜೆ 4:00 ಗಂಟೆಯಾಗಿದ್ದು ಕೂಡಲೇ ಅವರ ದಾಳಿ ಮಾಡಲಾಗಿ ಮಟಕಾ ಜೂಜಾಟದಲ್ಲಿ ತೊಡಗಿದ್ದವನು ಸಿಕ್ಕಿ ಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕಿಬಿದ್ದವನನ್ನು ವಿಚಾರಿಸಲಾಗಿ ಅವನು ತನ್ನ ಹೆಸರು ನರಸಿಂಹ ತಂದೆ ಬದುರೋಜಪ್ಪ ವಯಸ್ಸು 24 ವರ್ಷ, ಜಾತಿ: ನಾಯಕ ಉ: ಕೂಲಿ ಕೆಲಸ ಸಾ: ಗಾಳೆಮ್ಮ ಗುಡಿಯ ಹಿಂಭಾಗ, ಆನೇಗುಂದಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 3150/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ಪೆನ್ನು ದೊರೆತಿದ್ದು ಇದೆ. ನಂತರ ಅವನಿಗೆ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತೀಯಾ? ಅಂತಾ ವಿಚಾರಿಸಲು ಮಟಕಾ ಪಟ್ಟಿಯನ್ನು ಯಾರಿಗೂ ಕೊಡುವುದಿಲ್ಲಾ ತಾನೇ ಇಟ್ಟುಕೊಳ್ಳುವುದಾಗಿ ತಿಳಿಸಿದನು. ಈ ಬಗ್ಗೆ ಸಂಜೆ 4:00 ರಿಂದ 5:00 ಗಂಟೆಯವರೆಗೆ ಸ್ಥಳದಲ್ಲಿಯೇ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತನೊಂದಿಗೆ ಠಾಣೆಗೆ ವಾಪಸ್ ಬಂದಿದ್ದು, ಸದರಿ ಆರೋಪಿತರ ವಿರುದ್ಧ ಕಲಂ 78(III) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ. "  ಅಂತಾ ಇದ್ದ ದೂರಿನ ಆಧಾರದ ಮೇಲಿಂದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 243/2015 ಕಲಂ 78(iii) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ದಾಖಲು ಮಾಡಿ ತನಿಖೆ ಕೈಗೊಳ್ಳಲಾಯಿತು.
5) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 244/2015  ಕಲಂ 78(3) Karnataka Police Act & 420 IPC.
ದಿನಾಂಕ: 07-08-2015 ರಂದು ಸಂಜೆ 6:30 ಗಂಟೆಗೆ ಶ್ರೀ ಹನುಮರಡ್ಡೆಪ್ಪ, ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆರವರು ಕರ್ನಾಟಕ ರಾಜ್ಯ ಪೊಲೀಸ್ ಪರವಾಗಿ ಸ್ವಂತ ಫಿರ್ಯಾದಿಯನ್ನು ಸಲ್ಲಿಸಿ ಮೂಲ ಪಂಚನಾಮೆ, ಮುದ್ದೇಮಾಲು ಮತ್ತು ಆರೋಪಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶ ಈ ಪ್ರಕಾರ ಇದೆ. "ಇಂದು ದಿನಾಂಕ: 07-08-2015 ರಂದು ಸಾಯಂಕಾಲ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಕೇಸರಹಟ್ಟಿ ಗ್ರಾಮದ ಗಂಗಾವತಿ-ಕನಕಗಿರಿ ಮುಖ್ಯ ರಸ್ತೆಯ ಬಾಜು ಒಂದು ಪಂಚರ ಅಂಗಡಿ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಹೆಚ್ .ಸಿ. 68 ಪಿಸಿ 97, 160 ಹಾಗೂ ಎ.ಪಿ.ಸಿ. 77 ಇವರು ಮತ್ತು ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ನಂ: ಕೆ.ಎ-37/ ಜಿ-307 ನೇದ್ದರಲ್ಲಿ ಠಾಣೆಯಿಂದ ಸಂಜೆ 4:00 ಗಂಟೆಗೆ ಹೊರಟು ಕೇಸರಹಟ್ಟಿ ಗ್ರಾಮದ ಊರ ಮುಂದೆ ಜೀಪನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಅಲ್ಲಿ ಒಂದು ಪಂಚರ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿಯು ಕುಳಿತುಕೊಂಡು ಜನರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಗೆ     1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ, ಅದೃಷ್ಟದ ಮಟಕಾ ನಂಬರಗಳಿಗೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗುತ್ತಾ ಜನರನ್ನು ಕರೆದು ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಮೋಸದ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಸಂಜೆ 5:00 ಗಂಟೆಯಾಗಿದ್ದು ಕೂಡಲೇ ಅವರ ದಾಳಿ ಮಾಡಲಾಗಿ ಮಟಕಾ ಜೂಜಾಟದಲ್ಲಿ ತೊಡಗಿದ್ದವನು ಸಿಕ್ಕಿ ಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕಿಬಿದ್ದವನನ್ನು ವಿಚಾರಿಸಲಾಗಿ ಅವನು ತನ್ನ ಹೆಸರು ಯಮನೂರಸಾಬ ತಂದೆ ಹೊನ್ನೂರಸಾಬ ಗಂಗಾವತಿ ವಯಸ್ಸು: 45 ವರ್ಷ ಜಾತಿ: ಮುಸ್ಲಿಂ, ಉ: ಪಂಚರ ಅಂಗಡಿ ಸಾ: ಕೇಸರಹಟ್ಟಿ ತಾ: ಗಂಗಾವತಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ 480/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ ಪೆನ್ನು ದೊರೆತಿದ್ದು ಇದೆ. ನಂತರ ಅವನಿಗೆ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತೀಯಾ ? ಅಂತಾ ವಿಚಾರಿಸಲು ಹನುಮಂತ ಸಾ: ಕೇಸಕ್ಕಿ ಹಂಚಿನಾಳ ಎಂಬಾತನಿಗೆ ಕೊಡುವದಾಗಿ ತಿಳಿಸಿದನು. ಈ ಬಗ್ಗೆ ಸಾಯಂಕಾಲ 5:00 ಗಂಟೆಯಿಂದ 6:00 ಗಂಟೆಯವರಗೆ ಸ್ಥಳದಲ್ಲಿಯೇ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತನೊಂದಿಗೆ ಠಾಣೆಗೆ ವಾಪಸ್ ಬಂದಿದ್ದು, ಸದರಿ ಆರೋಪಿತನ ವಿರುದ್ಧ ಕಲಂ 78(iii) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ."  ಅಂತಾ ಇದ್ದ ದೂರಿನ ಆಧಾರದ ಮೇಲಿಂದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 244/2015 ಕಲಂ 78(iii) ಕೆ.ಪಿ. ಆ್ಯಕ್ಟ್ ಮತ್ತು ಕಲಂ 420 ಐ.ಪಿ.ಸಿ. ಅಡಿ ದಾಖಲು ಮಾಡಿ ತನಿಖೆ ಕೈಗೊಳ್ಳಲಾಯಿತು
6) ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ. 182/2015  ಕಲಂ 78(3) Karnataka Police Act & 420 IPC.
ದಿನಾಂಕ: 07-08-2015 ರಂದು ರಾತ್ರಿ 8-30 ಗಂಟೆಗೆ ಶ್ರೀ ಇ.ಕಾಳಿಕೃಷ್ಣ, ಪೊಲೀಸ್ ಇನ್ಸಪೆಕ್ಟರ್ ಗಂಗಾವತಿ ನಗರ ಪೊಲೀಸ್ ಠಾಣೆ ಇವರು ಒಬ್ಬ ಆರೋಪಿತಳೊಂದಿಗೆ ಮೂಲ ಪಂಚನಾಮೆ, ಮುದ್ದೆಮಾಲು ಹಾಗೂ ವರದಿಯನ್ನು ಸಲ್ಲಿಸಿದ್ದು  ಸದರಿ ವರದಿಯ ಸಾರಂಶವೇನೆಂದರೆ, ಇಂದು ದಿನಾಂಕ 07-08-2015  ರಂದು 19-00 ಗಂಟೆಗೆ ಆರೋಪಿತಳಾದ (01) ಶ್ರೀಮತಿ ಗೀತಾ ಗಂಡ ಲಕ್ಷ್ಮಣ ಇವರು ಗಂಗಾವತಿ ನಗರದ ಮುಜಾವರ ಕ್ಯಾಂಪಿನಲ್ಲಿ ತಾಯಪ್ಪ ಹೋಟಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರನ್ನು ಕರೆದು 01 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಕೂಗುತ್ತಾ ಸಾರ್ವಜನಿಕರಿಂದ ಹಣವನ್ನು ಪಡೆದುಕೊಂಡು ಅವರಿಗೆ ಮಟಕಾ ನಂಬರ ಬರೆದ ಚೀಟಿ ಬರೆದುಕೊಡುತ್ತಿರುವಾಗ ಸದರಿ ಮಹಿಳೆಯ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಹಿಡಿದು ಆರೋಪಿ ಶ್ರೀಮತಿ ಗೀತಾ ಇವರಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ ನಗದು ಹಣ ರೂ. 550-00. (02) ಮಟಕಾ ನಂಬರ ಬರೆದ ಒಂದು ನೋಟ್ ಪುಸ್ತಕ. (03) ಒಂದು ಬಾಲ್ ಪೆನ್ನು ಹಾಗೂ (04) ಒಂದು ನೋಕಿಯಾ ಕಂಪನಿಯ ಮೊಬೈಲ್ ದೊರೆತಿರುತ್ತದೆ.  ಸದರಿ ಮುದ್ದೇಮಾಲನ್ನು ಜಪ್ತಿ ಪಡಿಸಿದ ಬಗ್ಗೆ 7-00 ಪಿ.ಎಂ. ದಿಂದ 8-00 ಪಿ.ಎಂ.ದ ವರೆಗೆ ಪಂಚನಾಮೆಯನ್ನು ಬರೆದುಕೊಂಡಿದ್ದು ಇರುತ್ತದೆ.  ಆರೋಪಿ ನಂ. 02 ಕಳಕಪ್ಪ ಇವನು ಸದರಿ ಮಟಕಾ ಪಟ್ಟಿಗಳನ್ನು ತೆಗೆದುಕೊಳ್ಳುವ ಬುಕ್ಕಿ ಆಗಿರುತ್ತಾನೆ. ಕಾರಣ ಸದರಿಯವರ ಮೇಲೆ ಕ್ರಮ ಜರುಗಿಸಬೇಕೆಂದು ವರದಿ ಇರುತ್ತದೆ.  ಸದರಿ ಕೃತ್ಯವು 78(III) ಕೆ.ಪಿ.ಆ್ಯಕ್ಟ್ ಅಡಿಯಲ್ಲಿ ಬರುತ್ತಿದ್ದು, ಸದರಿ ಕಲಂ ಅಸಂಜ್ಞೆಯ ಅಪರಾಧವಾಗಿದ್ದರಿಂದ ಈ ಬಗ್ಗೆ ಪ್ರಕರಣ ದಾಖಲಿಸಲು ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು 11-10 ಪಿ.ಎಂ.ಕ್ಕೆ ಆರೋಪಿತರ ಮೇಲೆ ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ 182/ 15 ಕಲಂ. 78(III) ಕೆ.ಪಿ.ಆ್ಯಕ್ಟ್ ನೇದ್ದರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
7) ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ. 174/2015  ಕಲಂ 302  ಐ.ಪಿ.ಸಿ :.

ಫಿರ್ಯಾದಿದಾರರ ಮಗಳು ಮಲ್ಲಮ್ಮಳನ್ನು ಸುಮಾರು 15 ವರ್ಷದ ಹಿಂದ ಅಗಳಕೇರಾ ಗ್ರಾಮದ ಮಂಜುನಾಥ ತಂದೆ ನಿಂಗಪ್ಪ ಚಿಲಕಮುಕಿ ಇವರಿಗೆ ಕೊಟ್ಟು ಮದುವೆ ಮಾಡಿದ್ದು ಮಂಜುನಾಥನು ಫಿರ್ಯಾದಿದಾರರ ಮಗಳು ಮಲ್ಲಮ್ಮಳೊಂದಿಗೆ ಜಗಳ ಮಾಡುವದು ಹೊಡೆಯುವದು ಬಡೆಯುವದು ಮಾಡುತ್ತಿದ್ದನು. ಇಂದು ದಿನಾಂಕ. 07-08-2015 ರಂದು 03-00 ಪಿ.ಎಂ.ಕ್ಕೆ ಮಂಜುನಾಥನು ತನ್ನ ಹೆಂಡತಿ ಮಲ್ಲಮ್ಮಳೊಂದಿಗೆ ಜಗಳ ತೆಗೆದು ಇಬ್ಬರು ಜಗಳ ಮಾಡುತ್ತಿರುವಾಗ ಮಂಜುನಾಥನು ಕಟ್ಟಿಗೆಯಿಂದ ಮಲ್ಲಮ್ಮಳ ತಲೆಗೆ ಜೋರಾಗಿ ಹೊಡೆದು ಕೊಲೆ ಮಾಡಿದ್ದು ಇರುತ್ತದೆ ಅಂತಾ ಮುಂತಾಗಿದ್ದ ಪಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತಪಾಸಣೆ ಕೈಕೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008