Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Sunday, September 20, 2015

ಕೊಪ್ಪಳ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳು
1) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 125/2015  ಕಲಂ 87 Karnataka Police Act.
ದಿನಾಂಕ: 18-09-2015 ರಂದು 10-00 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 13 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಜೂಜಾಟದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 8-00 ಪಿಎಂಕ್ಕೆ ಕದ್ರಳ್ಳಿ ಗ್ರಾಮದ ಸಮುದಾಯಭವನದ ಮುಂದಿನ ಸಾರ್ವಜನಿಕ ಬಯಲು ಜಾಗೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ, ಸದರಿಯವರನ್ನು ವಶಕ್ಕೆ ಪಡೆದುಕೊಂಡು ಸದರಿಯವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್ಲ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 2500/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ ಕುಕನೂರ ಪೊಲೀಸ್ ಠಾಣಾ ಗುನ್ನೆ ನಂ: 124/2015 ಕಲಂ:87 ಕೆ.ಪಿ. ಅಕ್ಟ್ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದುಇರುತ್ತದೆ.
2) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 125/2015  ಕಲಂ 87 Karnataka Police Act.
ದಿನಾಂಕ: 18-09-2015 ರಂದು 10-05 ಪಿಎಂಕ್ಕೆ .ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 10 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಜೂಜಾಟದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 8-00 ಪಿಎಂಕ್ಕೆ ಕದ್ರಳ್ಳಿ ಗ್ರಾಮದ ಸಮುದಾಯ ಭವನದ ಮುಂದಿನ ಸಾರ್ವಜನಿಕ ಕಟ್ಟೆಯ ಮೇಲೆ ಕುಳಿತು ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ, ಸದರಿಯವರನ್ನು ವಶಕ್ಕೆ ಪಡೆದುಕೊಂಡು ಸದರಿಯವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಪ್ಲಾಸ್ಟಿಕ್ ಬರಕಾ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 3500/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ ಕುಕನೂರ ಪೊಲೀಸ್ ಠಾಣಾ ಗುನ್ನೆ ನಂ: 125/2015 ಕಲಂ:87 ಕೆ.ಪಿ. ಅಕ್ಟ್ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದುಇರುತ್ತದೆ.
3) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 126/2015  ಕಲಂ 87 Karnataka Police Act.
ದಿನಾಂಕ: 19-09-2015 ರಂದು 2-00 ಎಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 7 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಜೂಜಾಟದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 12-30 ಎಎಂಕ್ಕೆ ಅರಕೇರಿ ಗ್ರಾಮದ ಈಶ್ವರ ದೇವಸ್ಥಾನದ ಮುಂದಿನ ಸಾರ್ವಜನಿಕ ಬಯಲು ಜಾಗೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ, ಸದರಿಯವರನ್ನು ವಶಕ್ಕೆ ಪಡೆದುಕೊಂಡು ಸದರಿಯವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್ಲ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 2600/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ ಕುಕನೂರ ಪೊಲೀಸ್ ಠಾಣಾ ಗುನ್ನೆ ನಂ: 126/2015 ಕಲಂ:87 ಕೆ.ಪಿ. ಅಕ್ಟ್ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದುಇರುತ್ತದೆ.
4)  ಕುಷ್ಟಗಿ ಪೊಲೀಸ್ ಠಾಣೆ ಗುನ್ನೆ ನಂ. 161/2015  ಕಲಂ 379 ಐ.ಪಿ.ಸಿ:.
ದಿನಾಂಕ:19-09-2015 ರಂದು ಮದ್ಯಾಹ್ನ 01-30 ಗಂಟೆಗೆ ಪಿರ್ಯಾಧಿದಾರರಾದ ದಾಸಪ್ಪ ತಂದೆ ಯಮನಪ್ಪ ಪುಜಾರ ವಯಾ 42 ವರ್ಷ ಜಾ:ಭೋವಿ ಉ:ಗೌಂಡಿಕೆಲಸ ಸಾ: ವಿದ್ಯಾನಗರ ಕುಷ್ಟಗಿ ರವರು ಠಾಣೆಗೆ ಹಾಜರಾಗಿ ಹೇಳಿಕೆ ಪಿರ್ಯಾದಿ ನೀಡಿದ್ದರ ಸಾರಾಂಶವೇನೆಂದರೆ, ದಿನಾಂಕ:11-09-2015 ರಂದು ರಾತ್ರಿ 08-00 ಗಂಟೆಯ ಸುಮಾರಿಗೆ ತಮ್ಮ ಮನೆಯ ಮುಂದೆ ಬಿಟ್ಟು ಊಟಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡಿದ್ದು ದಿನಾಂಕ:12-09-2015 ರಂದು ಮುಂಜಾನೆ 06-30 ಗಂಟೆಯ ಸುಮಾರಿಗೆ ಎದ್ದು ಮನೆಯ ಮುಂದೆ ಇಟ್ಟಿದ್ದ ತನ್ನ ಮೋಟಾರ ಸೈಕಲ್ ನಂ: ಕೆ.ಎ-37- ಎಕ್ಷ-4392 ನೇದ್ದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಇರುತ್ತದೆ. ನನ್ನ ಮೋಟಾರ ಸೈಕಲ್ ನ್ನು ಸುತ್ತಾ-ಮುತ್ತಾ ಬೇರೆ ಕಡೆ ಎಲ್ಲಾ ಕಡೆಗೂ ಇಲ್ಲಿಯವರೆಗೂ ಹುಡಕಿದರೂ ಸಿಕ್ಕಿರುವುದಲ್ಲಾ. ಆದ್ದರಿಂದ ಮೋಟಾರ ಸೈಕಲ್ ನ್ನು ಹುಡುಕಿಕೊಡಲು ವಿನಂತಿ ಅಂತಾ ತಡವಾಗಿ ಬಂದು ಪಿರ್ಯಾದಿ ನೀಡಿದ್ದರ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂ:161/2015 ಕಲಂ 379 ಐ.ಪಿ.ಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡ ತನಿಖೆ ಕೈಕೊಂಡಿದ್ದು ಇರುತ್ತದೆ.
5) ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ.ನಂ. 216/2015  ಕಲಂ 186, 354, 504, 506  ಐ.ಪಿ.ಸಿ ಹಾಗೂ ಕಲಂ. 4 ಸಹಿತ 3 ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರವನ್ನು ಮತ್ತು ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸುವ ಅಧಿನಿಯಮ 2009.

ದಿನಾಂಕ:19-09-2015 ರಂದು ಪಿರ್ಯಾದಿದಾರರಾದ ಡಾ|| ಸುಜಾತಾ ವೈ. ಜಿ. ವೈಧ್ಯಾದಿಕಾರಿಗಳು ಉಪವಿಭಾಗ ಆಸ್ಪತ್ರೆ ಗಂಗಾವತಿ ರವರು ಠಾಣೆಗೆ ಹಾಜರಾಗಿ ಒಂದು ಗಣಕೀಕೃತ ಪಿರ್ಯಾದಿ ನೀಡಿದ್ದು ಅದರ ಸಾರಾಂಶವೇನೆಂದರೆ, ಪಿರ್ಯಾದಿದಾರರು ನಿನ್ನೆ ದಿನಾಂಕ:18-09-2015 ರಂದು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ 10-30 ಗಂಟೆಯ ಸುಮಾರಿಗೆ ಒಂದು ರಸ್ತೆ ಅಪಘಾತವಾದ ಗಾಯಾಳು ಬಂದಿದ್ದು, ಅದರ ಸಂಬಂದಿಕರು ಯಾರೂ ಇಲ್ಲವೆಂದು 108 ಅಂಬ್ಯೂಲೈನ್ಸ ದವರು ತಂದು ಚಿಕಿತ್ಸೆ ಕುರಿತು ಸೇರಿಕೆ ಮಾಡಿದಾಗ ಅದೇ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದು ಗಾಯಾಳುವಿಗೆ ಸಂಬಂದ ಪಟ್ಟ ವ್ಯಕ್ತಿಯ ಮೊಬೈಲ್ ನಂಬರ ತಮಗೆ ಗೊತ್ತಿರುವುದಾಗಿ ತಿಳಿಸಿದ್ದು, ಆಗ ಅವರಿಗೆ ಗಾಯಾಳು ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆ ಕರಿತು ವಿಮ್ಸ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದು ಆಗ ಆರೋಪಿತನಾದ ಮನೋಹರ ಚೌದರಿ ಎಂಬುವವರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈಧ್ಯಾಧಿಕಾರಿಗಳಿಗೆ ಮತ್ತು ನರ್ಸಗಳಿಗೆ ಕರ್ತವ್ಯಕ್ಕೆ ಅಡೆ ತಡೆ ಮಾಡಿ ನರ್ಸ ರವರ ಕೈಹಿಡಿದು ಎಳೆದು ಅವಮಾನ ಮಾಡಿದ್ದು ಅಲ್ಲದೇ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಾನು ಅಡ್ವೋಕೇಟ್ ಇರುವುದಾಗಿ ಹೇಳಿ ಕರ್ತವ್ಯ ನಿರತ ವೈಧ್ಯರ ಮತ್ತು ನರ್ಸಗಳ ಮೇಲೆ ಹಲ್ಯೆ ಮಾಡಿ ಅವರ ಕೈ ಹಿಡಿದು ಎಳೆದಾಡಿ ಹೆಣ್ಣುತನಕ್ಕೆ ಅವಮಾನ ಮಾಡಿದ್ದಲ್ಲದೇ ಅಲ್ಲದೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನುಗ್ಗಿ ದಾಂದಲೆ ಮಾಡಿ ಪಿಠೋಪಕರಣಗಳನ್ನು ಚಲ್ಳಾಪಿಲ್ಲಿಯಾಗಿ ಮಾಡಿದ್ದು, ಮತ್ತು ವೈಧ್ಯಾಧಿಕಾರಿಗಳಿಗೆ ಮತ್ತು ನರ್ಸಗಳಿಗೆ ಜೀವದ ಬೆದಿಕೆ ಹಾಕಿದ್ದರ ಬಗ್ಗೆ ನೀಡಿದ ಪಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008