Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, January 14, 2016

1) ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ.  07/2016 ಕಲಂ. 279, 337, 338 ಐ.ಪಿ.ಸಿ:.
ದಿ:13-01-16 ರಂದು 01-00 ಎ.ಎಮ್ ಕ್ಕೆ ಫಿರ್ಯಾದಿದಾರರಾದ ವಿರುಪಾಕ್ಷಪ್ಪ ನಂದ್ಯಾಪೂರ ಸಾ: ಲೇಬಗೇರಿ ತಾ: ಕೊಪ್ಪಳ ಇವರು ಠಾಣೆಗೆ ಹಾಜರಾಗಿ ಲಿಖಿತ ಫಿರ್ಯಾದಿಯನ್ನು ನೀಡಿದ್ದು ಸಾರಾಂಶವೇನೆಂದರೇ, ನಿನ್ನೆ ದಿ:12-01-16 ರಂದು ರಾತ್ರಿ 8-30 ಗಂಟೆಯ ಸುಮಾರಿಗೆ ನಾನು ಲೇಬಗೇರಿ ಗ್ರಾಮದ ಕ್ರಾಸ್ ಹತ್ತಿರ ಊರಿಗೆ ಹೋಗಲು ಗಾಡಿಗಾಗಿ ಕಾಯುತ್ತಿದ್ದಾಗ, ಅದೇವೇಳೆಗೆ ಕೊಪ್ಪಳ-ಕುಷ್ಟಗಿ ರಸ್ತೆಯ ಇರಕಲ್ ಗಡಾ ಕಡೆಯಿಂದ ಮೋಟಾರ ಸೈಕಲ್ ನಂ: ಕೆಎ-03/ಹೆಚ್.ಸಿ-8717 ನೇದ್ದರ ಚಾಲಕ ಶರಣಪ್ಪ ಇತನು ತನ್ನ ಮೋಟಾರ ಸೈಕಲ್ ನ್ನು ಮಾನವ ಜೀವಕ್ಕೆ ಅಪಾಯ ವಾಗುವ ರೀತಿಯಲ್ಲಿ ಅತೀವೇಗವಾಗಿ ಹಾಗೂ ಅಲಕ್ಷ್ಯತನದಿಂದಾ ಓಡಿಸಿಕೊಂಡು ಕೊಪ್ಪಳ ಕಡೆಗೆ ಹೋಗುವಾಗ ಲೇಬಗೇರಿ ಕ್ರಾಸ್ ಹತ್ತಿರ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿ ಪಂಪಣ್ಣ ಇತನಿಗೆ ಟಕ್ಕರ ಕೊಟ್ಟು ಅಪಘಾತ ಮಾಡಿದ್ದರಿಂದ ಪಂಪಣ್ಣನಿಗೆ ಭಾರಿ ಪೆಟ್ಟುಗಳಾಗಿದ್ದು, ಅಲ್ಲದೇ ಅಪಘಾತ ಮಾಡಿದ ಮೋಟಾರ ಸೈಕಲ್ ಸವಾರ ನಿಗೆ ಸಹ ಸಾದಾ ಸ್ವರೂಪದ ಗಾಯಗಳಾಗಿವೆ. ಕಾರಣ ಅಪಘಾತ ಮಾಡಿದ ಮೋಟಾರ ಸೈಕಲ್ ಸವಾರ ಶರಣಪ್ಪ ಕುಂಬಾರ. ಸಾ: ಇಂದರಗಿ ಹಾವ: ನಂದಿನಗರ ಕೊಪ್ಪಳ ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮುಂತಾಗಿ ನೀಡಿದ ದೂರಿನ ಮೇಲಿಂದ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.
2) ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ.  05/2016 ಕಲಂ. 457, 380 ಐ.ಪಿ.ಸಿ:
ದಿನಾಂಕ: 13-01-2016 ರಂದು ಮದ್ಯಾಹ್ನ 2-15 ಗಂಟೆಗೆ ಪಿರ್ಯದಿದಾರರು ಠಾಣೆಗೆ ಹಾಜರಾಗಿ ಒಂದು ಕನ್ನಡದಲ್ಲಿ ಗಣಕೀಕೃತ ಮಾಡಿದ ಪಿರ್ಯಾದಿಯನ್ನು ಹಾಜರ ಪಡಿಸಿದ್ದು ಅದರ ಸಾರಾಂಶವೇನಂದರೆ, ದಿನಾಂಕ: 12-01-2016 ರಂದು ರಾತ್ರಿ 10-00 ಗಂಟೆಯಿಂದ ದಿನಾಂಕ: 13-01-2016 ರ ಬೆಳಗಿನ 6-00 ಗಂಟೆಯ ನಡುವಿನ ಅವಧಿಯಲ್ಲಿ ಕರ್ಕಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ ಕೊಠಡಿಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳ ಪ್ರವೇಶ ಮಾಡಿ ಕೊಠಡಿಯಲ್ಲಿದ್ದ 1] ಹೆಚ್.ಸಿ.ಎಲ್. ಕಂಪನಿಯ 1 ಯು.ಪಿ.ಎಸ್.ಮತ್ತು ಅದರ ಮಾನಿಟರ ಅಂ.ಕಿ 27,750-00 ರೂ. 2] 4 ತಿನಕ್ಲೈಂಟ್ & ಮಾನಿಟರಗಳು ಅಂ.ಕಿ. 53,232-00 ರೂ. 3] 2 ಕೀ ಬೋರ್ಡಗಳು ಅಂ.ಕಿ. 2000-00 ರೂ. 4] 1 ಕೆನಾನ್ ಲೇಜರ್ ಪ್ರೀಂಟರ್ ಅಂ.ಕಿ. 8,793-00 ರೂ. ಮತ್ತು 5] 1 ಪ್ರೋಜೆಕ್ಟರ್ ಅಂ.ಕಿ. 40,000-00 ಒಟ್ಟು 01,31,775-00 ರೂ. ಬೆಲೆ ಬಾಳುವ ವಸ್ತುಗಳು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಅಂತಾ ಮುಂತಾಗಿ ಇದ್ದ ಪಿರ್ಯಾದಿ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂ. 05/2016 ಕಲಂ 457,380 ಐ.ಪಿ.ಸಿ. ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.              
3) ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ.  05/2016 ಕಲಂ 279, 337, 338 ಐ.ಪಿ.ಸಿ:.
ಹುಲಗಿ ಗ್ರಾಮದಲ್ಲಿ ನಂದಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆದಿದೆ ಎಂದು ಮಾಹಿತಿ ಬಂದ ಮೇರೆಗೆ ಫಿರ್ಯಾದಿದಾರರು ಸಿಬ್ಬಂದಿಯೊಂದಿಗೆ ಪಂಚರೊಂದಿಗೆ ದಾಳಿ ಮಾಡಿ ಮಟಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತನಿಗೆ ಹಿಡಿದು ಅವನ ಹತ್ತಿರ ಒಂದು ಮಟಕಾ ನಂಬರ ಬರೆದಿ ಚೀಟಿ, ಒಂದು ಬಾಲ ಪೆನ್ನು, ಜೂಜಾಟದ ನಗದು ಹಣ. 950=00 ರೂ. ಗಳು ಜಪ್ತ ಮಾಡಿಕೊಂಡು ಠಾಣೆಗೆ ಬಂದು ಫಿರ್ಯಾದಿ ನೀಡಿದ್ದರ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತಪಾಸಣೆ ಕೈಕೊಂಡಿದ್ದು ಇರುತ್ತದೆ.
4) ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 08/2016 ಕಲಂ 78(3) Karnataka Police Act.
ದಿನಾಂಕ: 13-01-2015 ರಂದು ರಾತ್ರಿ 9-00 ಗಂಟೆಗೆ ಶ್ರೀ ಚಿತ್ತರಂಜನ್ ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ಮಟಕಾ ಜೂಜಾಟದ ದಾಳಿ ಮಾಡಿ ವರದಿಯನ್ನು ಹಾಜರಪಡಿಸಿದ್ದು, ಸದರಿ ಪ್ರಕರಣವು ಅಸಂಜ್ಞೆಯ ಪ್ರಕರಣವಾಗಿದ್ದರಿಂದ ಮಾನ್ಯ ಘನ ನ್ಯಾಯಾಲಯದಿಂದಾ ಅನುಮತಿ ಪಡೆದುಕೊಂಡಿದ್ದು, ಸದರಿ ದೂರಿನ ಸಾರಾಂಶವೇನೆಂದರೇ, ಇಂದು ದಿ:13-01-2015 ರಂದು ರಾತ್ರಿ 7-00 ಗಂಟೆಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ, ಯಲಮಗೇರಿ ತಾಂಡಾದ ಶಿವಪ್ಪ ಕಾರಭಾರಿ ಇವರ ಮನೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ: 01 ಇತನು ಬರ ಹೋಗುವ ಸಾರ್ವಜನಿಕರಿಗೆ ನೀವು ಬರೆಯಿಸಿದ ನಶೀಬದ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇನೆ ಅಂತಾ ಕೂಗುತ್ತಾ ಮಟಕಾ ನಶೀಬದ ಜೂಜಾಟದಲ್ಲಿ ತೊಡಗಿದ್ದಾಗ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ಕೂಡಿಕೊಂಡು ಪಂಚರ ಸಮಕ್ಷಮದ ದಾಳಿ ಮಾಡಿ ಆರೋಪಿ ಹನುಮಂತ ಸಾ: ಯಲಮಗೇರಿ ತಾಂಡಾ ಇತನಿಂದ ಮಟಕಾ ಜೂಜಾಟದ ನಗದು ಹಣ ರೂ 1050=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಮತ್ತು ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು, ಸದರಿ ಆರೋಪಿತನು ತಾನು ಬರೆದ ಮಟಕಾ ಪಟ್ಟಿಯನ್ನು ಆರೋಪಿ ನಂ: 02 ಬಸವರಾಜ ಚವ್ಹಾಣ. ಸಾ: ಯಲಮಗೇರಿ ತಾಂಡಾ ಇತನು ತೆಗೆದುಕೊಳ್ಳುವುದಾಗಿ ತಿಳಿಸಿದ್ದು ಇರುತ್ತದೆ. ಅಂತಾ ಮುಂತಾಗಿ ನೀಡಿದ ದೂರಿನ ಮೇಲಿಂದ ರಾತ್ರಿ 10-00 ಗಂಟೆಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.
5) ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ. 06/2016 ಕಲಂ 78(3) Karnataka Police Act.
ಹುಲಗಿ ಗ್ರಾಮದಲ್ಲಿ ನಂದಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆದಿದೆ ಎಂದು ಮಾಹಿತಿ ಬಂದ ಮೇರೆಗೆ ಫಿರ್ಯಾದಿದಾರರು ಸಿಬ್ಬಂದಿಯೊಂದಿಗೆ ಪಂಚರೊಂದಿಗೆ ದಾಳಿ ಮಾಡಿ ಮಟಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತನಿಗೆ ಹಿಡಿದು ಅವನ ಹತ್ತಿರ ಒಂದು ಮಟಕಾ ನಂಬರ ಬರೆದಿ ಚೀಟಿ, ಒಂದು ಬಾಲ ಪೆನ್ನು, ಜೂಜಾಟದ ನಗದು ಹಣ. 950=00 ರೂ. ಗಳು ಜಪ್ತ ಮಾಡಿಕೊಂಡು ಠಾಣೆಗೆ ಬಂದು ಫಿರ್ಯಾದಿ ನೀಡಿದ್ದರ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತಪಾಸಣೆ ಕೈಕೊಂಡಿದ್ದು ಇರುತ್ತದೆ.
6) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 03/2016 ಕಲಂ 87 Karnataka Police Act.

ದಿನಾಂಕ:13-01-2016 ರಂದು 6-45 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 4 ಜನ ಆರೋಪಿತರನ್ನು ಹಾಜರಪಡಿಸಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಮಾಹಿತಿ ಬಂದ ಪ್ರಕಾರ ತಾವು ಮಾನ್ಯ ಸಿಪಿಐ ಯಲಬುರ್ಗಾರವರ ಮಾರ್ಗದರ್ಶನದಲ್ಲಿ ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 5-30 ಪಿಎಂಕ್ಕೆ ಆಡೂರು  ಗ್ರಾಮದ ಕುಡಿಯುವ ಕೆರೆ ಹತ್ತಿರದ ಬಯಲು ಜಾಗೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ, ಸದರಿಯವರನ್ನು ವಶಕ್ಕೆ ಪಡೆದುಕೊಂಡು ಸದರಿಯವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವಲ್,  52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 700-00 ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು

0 comments:

 
Will Smith Visitors
Since 01/02/2008