Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Wednesday, March 23, 2016

1) ಕೊಪ್ಪಳ ಸಂಚಾರಿ ಪೊಲೀಸ್ ಠಾಣೆ ಗುನ್ನೆ ನಂ: 13/2016 ಕಲಂ: 279, 338 ಐ.ಪಿ.ಸಿ ಮತ್ತು 187 ಐ.ಎಂ.ವಿ. ಕಾಯ್ದೆ:.
ದಿನಾಂಕ 22-03-2016 ರಂದು ಸಂಜೆ 5-10 ಗಂಟೆಗೆ ಕೊಪ್ಪಳದ ಕಿಮ್ಸ ಆಸ್ಪತ್ರೆಯಿಂದ ಎಂ.ಎಲ್.ಸಿ ಮಾಹಿತಿ ಬಂದ ಮೇರೆಗೆ ಆಸ್ಪತ್ರೆಗೆ ಹೋಗಿ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಫಿರ್ಯಾದಿಯ ಹೇಳಿಕೆಯನ್ನು ಪಡೆದುಕೊಂಡಿದ್ದು ಅದರ ಸಾರಾಂಶವೆನೆಂದರೆ, ಇಂದು ದಿನಾಂಕ. 22-03-2016 ರಂದು ಬೆಳಿಗ್ಗೆ 8-00 ಗಂಟೆಗೆ ಫಿರ್ಯಾದಿಯು ತಮ್ಮ ತಮ್ಮನಾದ ಪ್ರಕಾಶ ಇತನನ್ನು ಮಾತನಾಡಿಸಲು ಕಿಮ್ಸ ಆಸ್ಪತ್ರೆಗೆ ಬಂದಿದ್ದು ಅಲ್ಲಿ ಪ್ರಕಾಶನನ್ನು ಮಾತನಾಡಿಸಿಕೊಂಡು ವಾಪಾಸ ರೂಮಿಗೆ ಹೊಗಲು ಕಿಮ್ಸ ಆಸ್ಪತ್ರೆಯ ಮುಂದೆ ಚಂದ್ರು ಸಾ. ದದೇಗಲ್ಲ ಇತನ ಆಟೋವನ್ನು ಹತ್ತಿ ಕುಳಿತುಕೊಂಡು ಚಂದ್ರು ಇತನು ಆಟೋವನ್ನು ಗದಗ-ಹೊಸಪೇಟೆ ಎನ್.ಹೆಚ್-63 ರಸ್ತೆಯ ಮೇಲೆ ಬಿ.ಎಸ್ ಫವಾರ ಹೊಟೆಲ್ ಮುಂದೆ ಜೋರಾಗಿ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೊಗಿದ್ದರಿಂದ ಆಟೋ ನಿಯಂತ್ರಣ ಕಳೆದುಕೊಂಡು ರಸ್ತೆಯ ಮೇಲೆ ಪಲ್ಟಿಯಾಗಿ ಬಿದ್ದದ್ದರಿಂದ ಫಿರ್ಯಾದಿಯ ಎಡಗಾಲಿಗೆ ಗಂಭೀರ ಗಾಯ ಆಗಿರುತ್ತದೆ ಅಂತಾ ಇದ್ದ ಫಿರ್ಯಾದಿಯ ಹೇಳಿಕೆಯ ಸಾರಾಂಶದ ಮೇಲಿಂದ  ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಕೊಂಡೆನು.
2) ಅಳವಂಡಿ ಪೊಲೀಸ್ ಠಾಣೆ ಗುನ್ನೆ ನಂ: 51/2016 ಕಲಂ: 78(3) Karnataka Police Act:.
ದಿನಾಂಕ: 22-03-2016 ರಂದು ಸಂಜೆ 8-00 ಗಂಟೆಯ ಸುಮಾರಿಗೆ ಆರೋಪಿತನು ಅಳವಂಡಿ ಗ್ರಾಮದ ಶ್ರೀ ಯಮನೂರಸಾಬ ದಗರ್ಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ನಿರತನಾಗಿದ್ದಾಗ,   ಪಿಯರ್ಾದಿದಾರರು ತಮ್ಮ ಠಾಣೆಯ ಸಿಬ್ಬಂದಿ ಮತ್ತು ಪಂಚರೊಂದಿಗೆ ಮಟಕಾ ಜೂಜಾಟದ ದಾಳಿ ಮಾಡಿ  ಮಟಕಾ ಜೂಜಾಟದಲ್ಲಿ ನಿರತನಾಗಿದ್ದ ಆರೋಪಿತನಿಂದ ಮಟಕಾ ಜೂಜಾಟದ ಸಾಮಗ್ರಿಗಳನ್ನು ಹಾಗೂ ನಗದು ಹಣ 360=00 ರೂ.ಗಳನ್ನು ಜಪ್ತ ಮಾಡಿಕೊಂಡು ಪಂಚನಾಮೆಯನ್ನು ಪೂರೈಸಿಕೊಂಡು ವಾಪಸ್ ಠಾಣೆಗೆ ಬಂದು ಆರೋಪಿತನ ಮೇಲೆ ಕ್ರಮ ಜರುಗಿಸುವ ಕುರಿತು ಒಂದು ವರದಿ ಮತ್ತು ಆರೋಪಿತನನ್ನು ಹಾಜರಪಡಿಸಿದ್ದು, ವರದಿಯ ಸಾರಾಂಶದ ಮೇಲಿಂದ  ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.


0 comments:

 
Will Smith Visitors
Since 01/02/2008