ದಿನಾಂಕ:- 17-10-2016 ರಂದು ಸಂಜೆ ಗಂಗಾವತಿ ಗ್ರಾಮೀಣ
ಪೊಲೀಸ್ ಠಾಣೆ ವ್ಯಾಪ್ತಿಯ ಅಂಜೂರಿ ಕ್ಯಾಂಪ್ ಸರಕಾರಿ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ
ಅಂದಾರ ಬಾಹರ್ ಎಂಬ ಅದೃಷ್ಟದ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ ಖಚಿತವಾದ ಭಾತ್ಮಿ ಬಂದ
ಮೇರೆಗೆ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಮತ್ತು ಸಿಬ್ಬಂದಿಯವರಾದ
ಸಿಪಿಸಿ- 363, 131, 323, ಎ.ಪಿ.ಸಿ. 77 ಇವರನ್ನು ಮತ್ತು ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ನಮಗೆ
ಮಾಹಿತಿ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಿಂತು ನೋಡಲು ಸರಕಾರಿ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು
ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ
ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ
ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 6
ಜನರು ಸಿಕ್ಕಿಬಿದ್ದಿದ್ದು. ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ
ನಗದು ಹಣ ರೂ. 31,600-00 ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ
ಹಾಸಿದ್ದ ಒಂದು ಪ್ಲಾಸ್ಟಿಕ್ ಚೀಲ ಸಿಕ್ಕಿದ್ದು, ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
2] ಅಳವಂಡಿ ಪೊಲೀಸ್
ಠಾಣೆ ಗುನ್ನೆ ನಂ: 97/2016
ಕಲಂ: 78(3) Karnataka Police
Act.
ದಿನಾಂಕ: 17-10-2016 ರಂದು
ಸಾಯಂಕಾಲ 6-00 ಗಂಟೆಯ ಸುಮಾರಿಗೆ ಆರೋಪಿ ಚೇನ್ನವೀರಯ್ಯ ಈತನು ಮೈನಳ್ಳಿ ಗ್ರಾಮದ ಶ್ರೀ ಬುಡ್ಡಮ್ಮ
ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ನಿರತನಾಗಿದ್ದಾಗ, ಶ್ರೀ. ಶಂಕರಯ್ಯ
ಪಿ.ಎಸ್.ಐ ತಮ್ಮ ಸಿಬ್ಬಂದಿ ಮತ್ತು ಪಂಚರೊಂದಿಗೆ ಮಟಕಾ ಜೂಜಾಟದ ದಾಳಿ ಮಾಡಿ, ಮಟಕಾ ಜೂಜಾಟದಲ್ಲಿ ನಿರತನಾಗಿದ್ದ
ಆರೋಪಿತನಿಂದ ಮಟಕಾ ಜೂಜಾಟದ ಸಾಮಗ್ರಿಗಳನ್ನು ಹಾಗೂ ನಗದು ಹಣ 1050=00 ರೂ.ಗಳನ್ನು ಜಪ್ತ ಮಾಡಿಕೊಂಡು
ನಂತರ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
3] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 212/2016
ಕಲಂ: 279, 337, 338 ಐ.ಪಿ.ಸಿ:.
ದಿ:17-10-16 ರಂದು ರಾತ್ರಿ 9-45 ಗಂಟೆ ಸುಮಾರಿಗೆ ರಂಗನಾಥ ತಂದೆ ದ್ರುವಕುಮಾರ. ಸಾ:ಲಕ್ಷ್ಮೀಪೂರ.
ತಾ:ಕೆ.ಆರ್.ಪೇಟೆ ಫಿರ್ಯಾದಿದಾರರು ತನ್ನ ಸಹೋದ್ಯೋಗಿ ಲಾರಿ ಚಾಲಕ ಜೈಕುಮಾರ ಇಬ್ಬರೂ ಕೂಡಿ ಗಿಣಿಗೇರಿ
ಗ್ರಾಮದಲ್ಲಿ ಊಟ ಮಾಡಿ ವಾಪಾಸ್ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಯಲ್ಲಿ ಪಾರ್ಕಿಂಗ್ ಮಾಡಿದ್ದ
ತಮ್ಮ ಲಾರಿಯ ಹತ್ತಿರ ಹೋಗಲು ಅಂತಾ ಕೊಪ್ಪಳ-ಗಂಗಾವತಿ ರಸ್ತೆಯ ಅಲ್ಟ್ರಾಟೆಕ್ ಸಿಮೆಂಟ್
ಫ್ಯಾಕ್ಟರಿಯ ಗೆಸ್ಟ್ ಹೌಸ ಸಮೀಪದಲ್ಲಿ ರಸ್ತೆಯ ಎಡಬಾಜು ನಡೆದುಕೊಂಡು ಹೊರಟಿದ್ದಾಗ ಅದೇವೇಳೆಗೆ
ತಮ್ಮ ಹಿಂದಿನಿಂದ ಅಂದರೆ ಗಿಣಿಗೇರಿ ಕಡೆಯಿಂದ ಒಂದು ಮೋಟಾರ ಸೈಕಲ್ ನಂ: ಕೆಎ-37/ಎಸ್-0847 ನೇದ್ದರ ಚಾಲಕನು ತನ್ನ ಗಾಡಿಯನ್ನು ಅತೀವೇಗವಾಗಿ ಹಾಗೂ ಅಲಕ್ಷ್ಯತನದಿಂದಾ ಮಾನವ ಜೀವಕ್ಕೆ
ಅಪಾಯವಾಗುವ ರೀತಿಯಲ್ಲಿ ಓಡಿಸಿಕೊಂಡು ಬಂದವನೇ ನಡೆದುಕೊಂಡು ಹೊರಟಿದ್ದ ಫಿರ್ಯಾದಿಗೆ ಹಿಂದಿನಿಂದ
ಟಕ್ಕರ ಕೊಟ್ಟು ಅಪಘಾತ ಮಾಡಿದ್ದರಿಂದ ಫಿರ್ಯಾದಿಗೆ ಮತ್ತು ಮೋಟಾರ ಸೈಕಲ್ ಸವಾರನಿಗೆ ಭಾರಿ
ರಕ್ತಗಾಯಗಳಾಗಿದ್ದು ಅಲ್ಲದೇ ಮೋಟಾರ ಸೈಕಲ್ ಹಿಂದೆ ಕುಳಿತುಕೊಂಡು ಬಂದಿದ್ದ ಚೆನ್ನಬಸಪ್ಪ
ದೊಡ್ಡಮನಿ ಎಂಬುವವರಿಗೆ ಸಾದಾ ಸ್ವರೂಪದ ಗಾಯಗಳಾಗಿದ್ದು ಇರುತ್ತದೆ. ಪ್ರಕರಣವನ್ನು ದಾಖಲಿಸಿ
ತನಿಖೆ ಕೈಗೊಂಡಿದ್ದು ಅದೆ.
0 comments:
Post a Comment