Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, December 29, 2016

1] ಯಲಬುರ್ಗಾ ಪೊಲೀಸ್ ಠಾಣೆ ಗುನ್ನೆ ನಂ: 131/2016 ಕಲಂ 78(3) Karnataka Police Act.
ದಿನಾಂಕ: 28-12-2016  ರಂದು ಮದ್ಯಾಹ್ನ 03-05 ಗಂಟೆಯ ಸುಮಾರಿಗೆ ಆರೋಪಿ ನಂ 01 ಈತನು ಕೊನಸಾಗರ ಗ್ರಾಮದಲ್ಲಿ ಬರುವ ಬಸ್ಸ್ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ  ಒಂದು ರೂಪಾಯಿಗೆ 80 ರೂಪಾಯಿಗಳು ಬರುತ್ತವೆ ಓಸಿ ಮಟಕಾ ನಂಬರಗಳನ್ನು ಬರೆಯಿಸಿರಿ ಅಂತಾ ಜನರನ್ನು ಕೂಗಿ ಕರೆದು ಅವರಿಂದ ಹಣ ಪಡೆದು ಓಸಿ ಮಟಕಾ ನಂಬರಗಳನ್ನು ಬರೆದುಕೊಳ್ಳುತಿದ್ದಾಗ ಪಿ.ಎಸ್.ಐ. ಯಲಬುರ್ಗಾರವರು ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಹಿಡಿದಿದ್ದು, ಸದರಿ ಆರೋಪಿ ನಂ 01 ನೇದ್ದವನ ಹತ್ತಿರ ಮಟಕಾ ಜೂಜಾಟದ ನಗದು ಹಣ 520/-ರೂ. ಹಾಗೂ ಒಂದು ಓ.ಸಿ ಮಟ್ಕಾ ನಂಬರ್ ಬರೆದ ಚೀಟಿ & 01 ಬಾಲ ಪೆನ್  ಅ.ಕಿ ಇಲ್ಲ. ಹಾಗೂ ಒಂದು ನೋಕಿಯಾ ಕಂಪನಿಯ ಮೋಬೈಲ ಅ.ಕಿ 200/- ರೂ ಗಳೊಂದಿಗೆ ಸಿಕ್ಕಿಬಿದ್ದಿದ್ದು ಇರುತ್ತದೆ. ಸದರಿ ಆರೋಪಿ ನಂ. 01 ನೇದ್ದವನು ಜನರಿಂದ ಪಡೆದ ಓ.ಸಿ ಮಟ್ಕಾ ಜೂಜಾಟದ ಹಣವನ್ನು ಮತ್ತು ಮಟಕಾ ನಂಬರ ಬರೆದ ಚೀಟಿಯನ್ನು ಆರೋಪಿ ನಂ;2 ನೇದ್ದವನಿಗೆ ಖುದ್ದಾಗಿ ಗಜೇಂದ್ರಡಕ್ಕೆ ಹೋಗಿ ಕೊಡುತ್ತಿದ್ದು, ಹಾಗೂ ಆರೋಪಿ ನಂ:2 ನೇದ್ದವನ ಮೋಬೈಲ ನಂಬರ 9945109208 ನೇದ್ದಕ್ಕೆ ಫೋನ ಮಾಡಿ  ಮಟಕಾ ನಂಬರಗಳನ್ನು ಹೇಳುತ್ತಿದ್ದು, ಮಟ್ಕಾ ಜೂಜಾಟದಿಂದ ಬಂದ ಲಾಭದ ಹಣವನ್ನು ಆರೋಪಿ ನಂ 01 & 02 ನೇದ್ದವರು ಸಮನಾಗಿ ಹಂಚಿಕೊಳ್ಳುತ್ತಿದ್ದ ಬಗ್ಗೆ ತಿಳಿಸಿರುತ್ತಾನೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.
2] ಯಲಬುರ್ಗಾ ಪೊಲೀಸ್ ಠಾಣೆ ಗುನ್ನೆ ನಂ: 132/2016 ಕಲಂ 78(3) Karnataka Police Act.
ದಿನಾಂಕ: 28-12-2016  ರಂದು ಸಂಜೆ 06-55 ಗಂಟೆಯ ಸುಮಾರಿಗೆ ಆರೋಪಿ ನಂ 01 ಈತನು ಮುಧೋಳ ಗ್ರಾಮದಲ್ಲಿ ಬರುವ ಬಸ್ಸ್ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ  ಒಂದು ರೂಪಾಯಿಗೆ 80 ರೂಪಾಯಿಗಳು ಬರುತ್ತವೆ ಓಸಿ ಮಟಕಾ ನಂಬರಗಳನ್ನು ಬರೆಯಿಸಿರಿ ಅಂತಾ ಜನರನ್ನು ಕೂಗಿ ಕರೆದು ಅವರಿಂದ ಹಣ ಪಡೆದು ಓಸಿ ಮಟಕಾ ನಂಬರಗಳನ್ನು ಬರೆದುಕೊಳ್ಳುತಿದ್ದಾಗ ಪಿ.ಎಸ್.ಐ. ಯಲಬುರ್ಗಾರವರು ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಹಿಡಿದಿದ್ದು, ಸದರಿ ಆರೋಪಿ ನಂ 01 ನೇದ್ದವನ ಹತ್ತಿರ ಮಟಕಾ ಜೂಜಾಟದ ನಗದು ಹಣ 310/-ರೂ. ಹಾಗೂ ಒಂದು ಓ.ಸಿ ಮಟ್ಕಾ ನಂಬರ್ ಬರೆದ ಚೀಟಿ & 01 ಬಾಲ ಪೆನ್  ಅ.ಕಿ ಇಲ್ಲ. ಹಾಗೂ ಒಂದು ಇಂಟೇಕ್ಸ ಕಂಪನಿ ಮೋಬೈಲ ಅ.ಕಿ 300/- ರೂ ಗಳೊಂದಿಗೆ ಸಿಕ್ಕಿಬಿದ್ದಿದ್ದು ಇರುತ್ತದೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.
3] ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ: 152/2016 ಕಲಂ: 87 Karnataka Police Act.
ದಿನಾಂಕ:28-12-2016 ರಂದು 5-45 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಬಂದು ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು, ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 6 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ದಿನಾಂಕ:28-12-2016 ರಂದು 3.00 ಪಿಎಂಕ್ಕೆ ತೊಂಡಿಹಾಳ ಗ್ರಾಮದ ಮಸೀದಿ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದ ನಡೆದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 4-20 ಪಿಎಂಕ್ಕೆ ತೊಂಡಿಹಾಳ ಗ್ರಾಮದ ಮಸೀದಿ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 1200=00 ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.  
4] ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ: 153/2016 ಕಲಂ: 87 Karnataka Police Act.

ದಿನಾಂಕ:28-12-2016 ರಂದು 9-15 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಬಂದು ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು, ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 10 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ದಿನಾಂಕ:28-12-2016 ರಂದು 6.00 ಪಿಎಂಕ್ಕೆ ತೊಂಡಿಹಾಳ ಗ್ರಾಮದ ಕೆರೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದ ನಡೆದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 7-30 ಪಿಎಂಕ್ಕೆ ತೊಂಡಿಹಾಳ ಗ್ರಾಮದ ಕೆರೆಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 3140=00 ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

5] ಹನುಮಸಾಗರ ಪೊಲೀಸ್ ಠಾಣೆ ಗುನ್ನೆ ನಂ: 105/2016 ಕಲಂ 78(3) Karnataka Police Act.

ದಿನಾಂಕ: 28-12-2016 ರಂದು ಪಿ.ಎಸ್.ಐ. ರವರು ರಾತ್ರಿ 9-40 ಗಂಟೆಗೆ ಠಾಣೆಗೆ ಹಾಜರಾಗಿ ಮಟಕಾ ದಾಳಿ ಪಂಚನಾಮೆ, ಮುದ್ದೆಮಾಲು, ಇಬ್ಬರು ಆರೋಪಿತರೊಂದಿಗೆ ವರದಿ ನೀಡಿದ್ದು, ವರದಿ ಸಾರಾಂಶವು ಅಸಂಜ್ಞೆಯ ಅಪರಾಧವಾಗಿದ್ದರಿಂದ ಪ್ರಕರಣ ದಾಖಲಿಸಲು ಮಾನ್ಯ ನ್ಯಾಯಾಲಯಕ್ಕೆ ವಿನಂತಿ ಯಾದಿಯನ್ನು ಪಿ.ಸಿ-223 ರವರ ಸಂಗಡ ಮುದ್ದಾಂ ಕಳುಹಿಸಿಕೊಟ್ಟಿದ್ದು, ಸದರಿ ಪಿ.ಸಿ ರವರು ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ವಾಪಸ್ ಠಾಣೆಗೆ ರಾತ್ರಿ 23-05 ಗಂಟೆಗೆ ಬಂದಿದ್ದು, ಸದರಿ ವರದಿ ಸಾರಾಂಶವೇನೆಂದರೆ, ಪಿ.ಎಸ್.ಐ. ರವರು ಹೆಚ್.ಸಿ-11 ರವರೊಂದಿಗೆ ಪೆಟ್ರೋಲಿಂಗದಲ್ಲಿದ್ದಾಗ, ಹಳೇ ಬಜಾರದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ರವರು ಸಿಬ್ಬಂದಿ ಹೆಚ್.ಸಿ-11, ಪಿ.ಸಿ-223 ಹಾಗೂ ಪಂಚರಾದ 1] ಚಾಂದಪಾಷಾ ತಂದೆ ಗುಡುಸಾಬ ಹುನಗುಂದ 2] ಬಸಪ್ಪ ತಂದೆ ಚಿನ್ನಪ್ಪ ಮುಳಗುಂದ ಇಬ್ಬರು ಸಾ: ಹನಮಸಾಗರ ರವರೊಂದಿಗೆ ಹಳೇ ಬಜಾರದ ವಿರೇಶ ಟೇಲರ್ ಅಂಗಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಿದಾಗ ಮಟಕಾ ಬರೆಯುವವನು ಸಿಕ್ಕಿ ಬಿದ್ದಿದ್ದು ವಿಚಾರಿಸಲು ತನ್ನ ಹೆಸರು ರಫೀಕಸಾಬ ಬದಾಮಿ ಸಾ: ಹನಮಸಾಗರ ಅಂತಾ ಹೇಳಿದ್ದು, ಆತನ ಅಂಗ ಜಪ್ತಿ ಮಾಡಲಾಗಿ ಒಂದು ಮಟಕಾ ಚೀಟಿ, ಒಂದು ಬಾಲ್ ಪೆನ್ನು, ನಗದು ಹಣ 800/- ರೂ ಸಿಕ್ಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

6] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 250/2016 ಕಲಂ 78(3) Karnataka Police Act.

ದಿ:28-12-2016 ರಂದು ಸಂಜೆ 7-00 ಗಂಟೆಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ, ಬಹದ್ದೂರಬಂಡಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪ ಸಾರ್ವಜನಿಕ ಸ್ಥಳದಲ್ಲಿ  ಆರೋಪಿ ನಂ: 01 ರಾಜಾಸಿಂಗ್ ಇತನು ಬರ ಹೋಗುವ ಸಾರ್ವಜನಿಕರಿಗೆ ನೀವು ಬರೆಯಿಸಿದ ನಶೀಬದ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇನೆ. ಅಂತಾ ಕೂಗುತ್ತಾ ಮಟಕಾ ನಶೀಬದ ಜೂಜಾಟದಲ್ಲಿ ತೊಡಗಿದ್ದಾಗ ಮತ್ತು ಜನರಿಂದ ಮಟಕಾ ಬರೆದ ಹಣ ಪಡೆಯುತ್ತಿದ್ದ ಆರೋಪಿ ನಂ: 02 ನಬೀಸಾಬ ಹೀಗೆ ಇವರು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ, ಶ್ರೀ ಗುರುರಾಜ. ಪಿ.ಎಸ್.ಐ ಕೊಪ್ಪಳ ಗ್ರಾಮೀಣ ಠಾಣೆ ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿ ನಂ: 01 ರಾಜಾಸಿಂಗ್ ಇತನಿಂದ ನಗದು ಹಣ ರೂ 650=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಹಾಗೂ ಒಂದು ಬಾಲಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈ ಗೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008