Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Monday, December 5, 2016

1] ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ: 198/2016 ಕಲಂ: 279, 338, 304(ಎ) ಐ.ಪಿ.ಸಿ:.
ದಿನಾಂಕ: 03-12-2016 ರಂದು ಸಂಜೆ 6-30 ಗಂಟೆ ಸುಮಾರಿಗೆ ಗಾಯಾಳು ಸುರಭಿ ತಂದೆ ಮಂಜುನಾಥ ಬೂದಗುಂಪಿ ಇವರು ತಮ್ಮ ಹೋಂಡಾ ಆಕ್ಟಿವ್ ಮೋಟರ ಸೈಕಲ್ ನಂ. ಕೆಎ-37/ಡಬ್ಲ್ಯೂ-9539 ನೇದ್ದರಲ್ಲಿ ಮೃತ ಶಬರೀಶ ವಯ: 2 ವರ್ಷ ಇತನನ್ನು ಕರೆದುಕೊಂಡು ಹಿಟ್ನಾಳದಿಂದ ಹುಲಗಿಗೆ ಹೋಗುವ ಸಮಯದಲ್ಲಿ ಹಿಟ್ನಾಳ ಗ್ರಾಮದ ವೀರಣ್ಣ ಗೊಂಡಬಾಳ ಇವರ ಮನೆ ಹತ್ತಿರ ಎದುರು ಗಡೆಯಿಂದ ಆರೋಪಿತನು ತನ್ನ ಟಾಟಾ ಮ್ಯಾಜಿಕ ವಾಹನ ನಂ. ಕೆಎ-37/ಎ-6743 ನೇದ್ದನ್ನು ಅತೀ ವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮೋಟರ ಸೈಕಲಗೆ ಡಿಕ್ಕಿ ಕೊಟ್ಟು ಅಪಘಾತ ಪಡಿಸಿದ್ದು, ಸುರಭಿ ಇವರಿಗೆ ಭಾರಿ ಸ್ವರೂಪ ಗಾಯಗಳಾಗಿದ್ದು, ಶಬರೀಶನಿಗೂ ಸಹ ಭಾರಿ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆ ಕುರಿತು ಕೊಪ್ಪಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 7-20 ಪಿ.ಎಂ. ಕ್ಕೆ ಶಬರೀಶ ವಯ: 2 ವರ್ಷ ಇತನು ಮೃತಪಟ್ಟಿರುತ್ತಾನೆ.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
2] ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ: 199/2016 ಕಲಂ: 143, 147, 323, 355, 504, 506 ಸಹಿತ 149 ಐ.ಪಿ.ಸಿ ಮತ್ತು 3(1)(10) ಎಸ್.ಸಿ/ಎಸ್.ಟಿ. ಕಾಯ್ದೆ:.
ದಿನಾಂಕ: 04-12-2016 ರಂದು ಮದ್ಯಾಹ್ನ್ 3-30 ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ಲಿಖಿತ ಪಿರ್ಯಾದಿಯನ್ನು ಹಾಜರ ಪಡಿಸಿದ್ದು ಅದರ ಸಾರಾಂಶವೇನಂದರೆ, ದಿನಾಂಕ: 03-12-2016 ಸಂಜೆ 4-00 ಗಂಟೆ ಸುಮಾರಿಗೆ ಪಿರ್ಯಾದಿದಾರರು ಹೊಳೆಯ ಹೊಲದಲ್ಲಿ ನೇಗಿಲು ಹೋಡೆಸಿರುವುದ ವಿಷಯದಲ್ಲಿ ಆರೋಪಿತರೆಲ್ಲರೂ ಗುಂಪು ಕಟ್ಟಿಕೊಂಡು ಪಿರ್ಯಾದಿ ಸಂಗಡ ವಿನಾಃ ಕಾರಣ ಜಗಳ ತೆಗೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿ ಚಪ್ಪಲಿ ಕಾಲಿನಿಂದ ಒದ್ದು ನಿನ್ನನ್ನು ತುಂಡ-ತುಂಡು ಮಾಡುತ್ತೇವೆ ಎಂದು ಅವಾಚ್ಯವಾಗಿ ಬೈದಾಡಿ ಕೈಯಿಂದ ಮತ್ತು ಚಪ್ಪಲಿಯಿಂದ ಹೊಡಿ-ಬಡಿ ಮಾಡಿ ಜೀವದ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುತ್ತಾರೆಂದು ಮುಂತಾಗಿದ್ದ ಪಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿರುತ್ತದೆ.
3] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 239/2016 ಕಲಂ: 87 Karnataka Police Act.

ದಿ :04.12.2016  ರಂದು 05.00 ಪಿ.ಎಮ್ ಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯ ಓಜನಹಳ್ಳಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ದುಂಡಾಗಿ ಕುಳಿತು ಪಣಕ್ಕೆ ಹಣವನ್ನು ಹಚ್ಚಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಪಿ.ಎಸ್,ಐ ರವರು  ಸಿಬ್ಬಂದಿಯವರನ್ನು ಸಂಗಡ ಕರೆದುಕೊಂಡು ಪಂಚರ ಸಮಕ್ಷಮ ದಾಳಿ ಮಾಡಿದ್ದು 06 ಜನರು ಸಿಕ್ಕಿಬಿದ್ದಿದ್ದು, ಸಿಕ್ಕಿಬಿದ್ದವರಿಂದ ಜೂಜಾಟಕ್ಕೆ ಉಪಯೋಗಿಸಿ ನಗದು ಹಣ 2340=00 ರೂ, ಮತ್ತು 52 ಇಸ್ಪೇಟ್ ಎಲೆಗಳನ್ನು ಹಾಗೂ ಒಂದು ಹಾಳೆಯ ಚೀಲ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು ಸಿಕ್ಕಿ 04 ಜನ ಆರೋಪಿತರನ್ನು ವಶಕ್ಕೆ ತೆಗೆದುಕೊಂಡು ಹೀಗೆ ಸದರಿ ಆರೋಪಿತರ ವಿರುದ್ದ ಕಾನೂನು ಕ್ರಮ ಜರುಗಿಸಿದ್ದು ಇರುತ್ತದೆ.

0 comments:

 
Will Smith Visitors
Since 01/02/2008