Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Saturday, February 11, 2017

1] ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ: 22/2017 ಕಲಂ: 78(3) Karnataka Police Act.
ದಿನಾಂಕ:-10-02-2017 ರಂದು ಸಂಜೆ 05-30  ಗಂಟೆಗೆ ಮಾನ್ಯ ಪಿ.ಎಸ್.ಐ ಸಾಹೇಬರು ಒಂದು ಇಸ್ಪೀಟ್ ಜೂಜಾಟದ ದಾಳಿ ಮೂಲ ಪಂಚನಾಮೆ, ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರ ಮತ್ತು ವರದಿಯನ್ನು ಹಾಜರುಪಡಿಸಿದ್ದು ಸದರಿ ವರದಿಯ ಸಾರಾಂಶವೆನಂದರೆ ಇಂದು 10-02-2017 ರಂದು ಸಾಯಂಕಾಲ 4-00  ಗಂಟೆಯ ಸುಮಾರಿಗೆ ಬೇವಿನಾಳ ಗ್ರಾಮದ ಅಗಸಿಮುಂದೆ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿದಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 8 ಜನರು ಸಿಕ್ಕಿಬಿದ್ದಿದ್ದು ಸಿಕ್ಕಿಬಿದ್ದ ಆರೋಪಿತರ ಕಡೆಯಿಂದ ಹಾಗೂ ಖಣದಲ್ಲಿ ಸೇರಿ ಒಟ್ಟು ರೂ. 21500=00 ಗಳನ್ನು ಮತ್ತು ಇಸ್ಪೀಟ್  ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಇರುತ್ತದೆ.  ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
2] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 24/2017 ಕಲಂ: 279, 338. ಐಪಿಸಿ
ದಿ:10-02-2017 ರಂದು ಸಂಜೆ 6-45 ಗಂಟೆಗೆ ಕೊಪ್ಪಳ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಗಾಯಾಳು ಕರಿಯಪ್ಪ ಕಂಬಳಿ. ಸಾ: ಗುತ್ತೂರ. ಇವರು ನೀಡಿದ ದೂರಿನ ಸಾರಾಂಶವೇನೆಂದರೇ, ನಿನ್ನೆ ದಿ:09-02-2017 ರಂದು ರಾತ್ರಿ 10-30 ಗಂಟೆಯ ಸುಮಾರಿಗೆ ಫಿರ್ಯಾದಿದಾರರು ಇತರೆ ಸಂಗಡಿಗರೊಂದಿಗೆ ಹುಣ್ಣಿಮೆಯ ಪ್ರಯುಕ್ತ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಹುಲಿಗಿಗೆ ಅಂತಾ ಕಾಲ್ನಡಿಗೆಯಲ್ಲಿ ಕೊಪ್ಪಳ-ಬೇವೂರ ರಸ್ತೆಯ ಶ್ರೀ ಮಾರುತಿ ದೇವಾಲಯದ ಹತ್ತಿರ ನಡೆದುಕೊಂಡು ಬರುತ್ತಿದ್ದಾಗ, ಅದೇ ಸಮಯಕ್ಕೆ ತಮ್ಮ ಹಿಂದಿನಿಂದ ಅಂದರೆ ಬೇವೂರ ಕಡೆಯಿಂದ ಟ್ರ್ಯಾಕ್ಸ ನಂ: ಕೆಎ-37/ಎ-4976 ನೇದ್ದರ ಚಾಲಕನು ತನ್ನ ವಾಹನವನ್ನು ಅತೀವೇಗವಾಗಿ ಹಾಗೂ ಅಲಕ್ಷ್ಯತನದಿಂದಾ ಚಲಾಯಿಸಿಕೊಂಡು ಬಂದು ಫಿರ್ಯಾದಿದಾರರಿಗೆ ಟಕ್ಕರ ಕೊಟ್ಟು ಅಪಘಾತ ಮಾಡಿದ್ದರಿಂದ ತಲೆಗೆ ಭಾರಿ ರಕ್ತಗಾಯ, ಹಾಗೂ ಬಲಗೈ ಮೊಣಕೈ ಹತ್ತಿರ ಹಾಗೂ ಎಡಕಾಲ ಚಪ್ಪೆಗೆ ಒಳಪೆಟ್ಟಾಗಿದ್ದು ಇರುತ್ತದೆ. ಕಾರಣ ಅಪಘಾತ ಮಾಡಿದ ಟ್ರ್ಯಾಕ್ಸ ಚಾಲಕನ ಮೇಲೆ ಕಾನೂನು ಕ್ರಮ ಜರುಗಿಸುವಂತೆ ತಡವಾಗಿ ನೀಡಿದ ದೂರನ್ನು ಪಡೆದುಕೊಂಡು, ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.

0 comments:

 
Will Smith Visitors
Since 01/02/2008