Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Sunday, May 14, 2017

1] ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ. 97/2017 ಕಲಂ: 78(3) Karnataka Police Act.
ದಿನಾಂಕ: 13-05-2017 ರಂದು 3-15 ಪಿ.ಎಂ. ಸುಮಾರಿಗೆ ಹಿರೆಬಗನಾಳ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಬಸವರಾಜ ತಂ/ ತಿಪ್ಪಣ್ಣ ಮುತ್ತಣ್ಣನವರ್ ವಯ: 45, ಜಾತಿ: ವಾಲ್ಮಿಕಿ, ಉ: ಪಾನಶಾಪ್ ಸಾ: ಹಿರೆಬಗನಾಳ ಇವನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ, ಪಿರ್ಯಾದಿದಾರರಾದ ಶ್ರೀ ಕೆ.ಜಯಪ್ರಕಾಶ ಪಿ.ಎಸ್.ಐ ರವರು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ ದಾಳಿ ಮಾಡಿ ಆರೋಪಿತನನ್ನು ಹಿಡಿದುಕೊಂಡು ಆತನಿಂದ 1480-00 ರೂ. ಮಟಕಾ ಜೂಜಾಟದ ನಗದು ಹಣ ಮತ್ತು ಒಂದು ಬಾಲ್ ಪೆನ್ ಹಾಗೂ ಒಂದು ಮಟ್ಕಾ ಚೀಟಿಯನ್ನು ಜಪ್ತ ಪಡಿಸಿಕೊಂಡಿರುತ್ತದೆ ಎಂದು ಮುಂತಾಗಿದ್ದ ಫಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.
2] ಕನಕಗಿರಿ ಪೊಲೀಸ್ ಠಾಣೆ ಗುನ್ನೆ ನಂ. 49/2017 ಕಲಂ: 87 Karnataka Police Act.


ದಿನಾಂಕ 13-05-2017 ರಂದು ಮುಂಜಾನೆ 11-00 ಗಂಟೆಯಿಂದ 12-00 ಗಂಟೆಯ ಅವಧಿಯಲ್ಲಿ ಠಾಣಾ ವ್ಯಾಪ್ತಿಯ ನವಲಿ ತಾಂಡ ಗ್ರಾಮದ ಶ್ರೀ ಸೇವಾಲಾಲ್ ಗುಡಿಯ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ದುಂಡಾಗಿ ಕುಳಿತು ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟ ಆಡುತ್ತಿದ್ದಾಗ ಮಾನ್ಯ ಸಿ.ಪಿ.ಐ ಸಾಹೇಬರು ಗಂಗಾವತಿ ಗ್ರಾಮೀಣ ವೃತ್ತ ರವರು ಮತ್ತು ಸಿಬ್ಬಂದಿಯವರೊಂದಿಗೆ ಹಾಗೂ ಪಂಚರ ಸಮಕ್ಷಮ ದಾಳಿ ಮಾಡಿ ಹಿಡಿಯಲಾಗಿ, ಜೂಜಾಟ ಆಡುತ್ತಿದ್ದ 11 ಜನರು ಸಿಕ್ಕಿದ್ದು, ಸದರಿ 11 ಜನರನ್ನು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಒಟ್ಟು ಹಣ ರೂ.7240=00 ಗಳನ್ನು ಮತ್ತು ಜೂಜಾಟಕ್ಕೆ ಉಪಯೋಗಿಸಿದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡೆನು. 

0 comments:

 
Will Smith Visitors
Since 01/02/2008