Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Tuesday, June 13, 2017

1] ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ. 107/2017 ಕಲಂ. 78(3) Karnataka Police Act.
ದಿನಾಂಕ:-12-06-2017 ರಂದು 4-05 ಗಂಟೆಗೆ ಮಲ್ಲಪ್ಪ ಎ.ಎಸ್.ಐರವರು ಠಾಣೆಗೆ ಹಾಜರಾಗಿ ಮಟ್ಕಾ ಜೂಜಾಟದ ವರದಿ ಮೂಲ ಪಂಚನಾಮೆ ಮತ್ತು ಮಾನ್ಯ ನ್ಯಾಯಾಲಯದ ಪರವಾನಿಗೆಯೊಂದಿಗೆ ಠಾಣೆಗೆ ಹಾಜರಾಗಿ ಕೊಟ್ಟ ವರದಿಯ ಸಾರಾಂಶದಲ್ಲಿ ಇಂದು ದಿನಾಂಕ:-12-06-2017 ರಂದು ಮದ್ಯಾಹ್ನ 2-30 ಗಂಟೆಗೆ ಚಳ್ಳುರು ಕ್ಯಾಂಪ್ ಗ್ರಾಮದ ಚಳ್ಳೂರು ತೊಂಡಿಹಾಳ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಲು ಎ-1 ಸಿಕ್ಕಿ ಬಿದ್ದಿದ್ದು ಎ-2 ಓಡಿಹೋಗಿದ್ದು ಸಿಕ್ಕ ಎ-1 ಕಡೆಯಿಂದ ರೂ. 720=00 ನಗದು ಹಣ ಹಾಗೂ ಮಟಕಾ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದುಇರುತ್ತದೆ. 
2] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 141/2017 ಕಲಂ. 78(3) Karnataka Police Act.
ದಿನಾಂಕ: 12-06-2017 ರಂದು ಸಂಜೆ ನಾನು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿರುವಾಗ ಠಾಣಾ ವ್ಯಾಪ್ತಿಯ ಬರುವ ಮುಷ್ಟೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಶ್ರೀ ಪ್ರಕಾಶ. ಎಲ್. ಮಾಳಿ, ಪಿ.ಎಸ್.ಐ. ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಸಿಬ್ಬಂದಿಯವರಾದ ಪಿ.ಸಿ. ನಂ: 386, ಎ.ಹೆಚ್.ಸಿ. 17 ಇವರು ಮತ್ತು ಇಬ್ಬರು ಪಂಚರು ಕೂಡಿಕೊಂಡು ಸರಕಾರಿ ಜೀಪ್ ನಂ: ಕೆ.ಎ-37 / ಜಿ-307 ನೇದ್ದರಲ್ಲಿ ಠಾಣೆಯಿಂದ ಸಂಜೆ 4:30 ಗಂಟೆಗೆ ಹೊರಟು ಮಾಹಿತಿ ಇದ್ದ ಪ್ರಕಾರ ಮುಷ್ಟೂರು ಗ್ರಾಮಕ್ಕೆ ಹೋಗಿ ಅಲ್ಲಿ ಕರ್ತವ್ಯದಲ್ಲಿದ್ದ ಹೆಚ್.ಸಿ. 44, ಪಿ.ಸಿ. 328 ಇವರುಗಳನ್ನು ಸಂಗಡ ಕರೆದುಕೊಂಡು ಹೊರಟು ಮಾಹಿತಿ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ವಾಹನವನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ಮರೆಯಲ್ಲಿ ನಿಂತು ನೋಡಲಾಗಿ  ಸರಕಾರಿ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿ 1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ ಅದೃಷ್ಟದ ಮಟಕಾ ಅಂಕಿಗಳ ಮೇಲೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗಿ ಜನರನ್ನು ಕರೆದು ಜನರಿಂದ ಹಣ ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಅದೃಷ್ಠದ ಮಟಕಾ ಜೂಜಾಟದಲ್ಲಿ ತೊಡಗಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಮಟಕಾ ಪಟ್ಟಿ ಬರೆಯುತ್ತಿದ್ದವನು ಸಿಕ್ಕಿಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕವನ ಹೆಸರು ವಿಚಾರಿಸಲಾಗಿ ತನ್ನ ಹೆಸರು ಈರಣ್ಣ ತಂದೆ ಪಂಪಣ್ಣ ಗಂಗಲ, ವಯಸ್ಸು 48 ವರ್ಷ, ಜಾತಿ: ಕಬ್ಬೇರ ಉ: ಒಕ್ಕಲುತನ ಸಾ: ಮುಷ್ಟೂರು. ತಾ: ಗಂಗಾವತಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 370/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ಪೆನ್ನು ದೊರೆತಿದ್ದು ಇದೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.   
3] ಕುಷ್ಟಗಿ ಪೊಲೀಸ್ ಠಾಣೆ ಗುನ್ನೆ ನಂ. 142/2017 ಕಲಂ. 78(3) Karnataka Police Act.
ದಿನಾಂಕ: 12-06-2017 ರಂದು ರಾತ್ರಿ 9-15 ಗಂಟೆಗೆ ಮಾನ್ಯ ಪಿ.ಎಸ್.ಐ ಸಾಹೇಬರು ಕುಷ್ಟಗಿ ಪೊಲೀಸ್ ಠಾಣೆ ರವರು ಹಾಜರುಪಡಿಸಿದ ವರದಿ, ಪಂಚನಾಮೆ ಸಾರಾಂಶವೆನೆಂದರೆ ಕುಷ್ಟಗಿ ಪಟ್ಟಣದ ದಾವಲ ಮಲ್ಲಿಕ್ ಹೊಟೇಲ್ ಹತ್ತಿರ ಮಟಕಾ ಜೂಜಾಟ ನಡೆದಿದೆ ಅಂತಾ ಮಾಹಿತಿ ಮೇರೆಗೆ ಹೋಗಿದ್ದು ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರಾದ ಪಿ.ಸಿ-117,161,407 ಮತ್ತು ಸರಕಾರಿ ಜೀಪ್ ಚಾಲಕ ಎ.ಪಿ.ಸಿ-230 ಮುದಕಪ್ಪ ಎಲ್ಲರೂ ಹೋಗಿ ದಾವಲ ಮಲ್ಲಿಕ್ ಹೊಟೇಲ್  ಹತ್ತಿರ ದೂರದಲ್ಲಿ ನಿಂತು ನೋಡಲು ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಜನರಿಂದ ಹಣ ಪಡೆಯುತ್ತಾ ಮಟಕಾ ಜೂಜಾಟದಲ್ಲಿ ತೊಡಗಿ ಮಟಕಾ ಚೀಟಿಗಳನ್ನು ಬರೆದುಕೊಡುತ್ತಿದ್ದನು. ಆಗ ನಾವು ಒಮ್ಮಲೇ ಎಲ್ಲರೂ ರೇಡ ಮಾಡಲು ಪೊಲೀಸರನ್ನು ನೋಡಿ ಮಟಕಾ ಬರೆಯಿಸುತ್ತಿದ್ದ ಜನ ಓಡಿ ಹೋಗಿದ್ದು, ಮಟಕಾ ಬರೆಯುತ್ತಿದ್ದವನು ಸಹ ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ಸದರಿಯವನ್ನು ಹಿಡಿದು ವಿಚಾರಿಸಿದಾಗ ಹೆಸರು ಅಜ್ಮೀರ ತಂದೆ ಅಮೀನಸಾಬ ಡಾವಣಗೇರಿ  ವಯಾ: 25 ವರ್ಷ ಜಾ:ಮುಸ್ಲಿಂ ಉ: ಚಿಕನ ಖಾನಾವಳಿ ಕೆಲಸ ಸಾ: ತೆಗ್ಗಿನ ಓಣಿ ಕುಷ್ಟಗಿ ತಾ: ಕುಷ್ಟಗಿ ತಿಳಿಸಿದ್ದು ಮತ್ತು ಮಟ್ಕಾ ಜೂಜಾಟದಲ್ಲಿ ತೊಡಗಿದ್ದನ್ನು ಒಪ್ಪಿಕೊಂಡನು. ಸದರಿಯವನನ್ನು ಅಂಗ ಜಡತಿ ಮಾಡಿದಾಗ ಮಟಕಾ ಜೂಜಾಟದ ಹಣ 1070=00 ರೂಪಾಯಿ ನಗದು ಹಣ, ಒಂದು ಬಾಲ್ ಪೆನ್ನು ಹಾಗೂ ಒಂದು ಮಟ್ಕಾ ಬರೆದ ಪಟ್ಟಿ  ಇವುಗಳನ್ನು ಜಪ್ತ ಪಡಿಸಿದ್ದು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೇನು.     
4] ಕನಕಗಿರಿ ಪೊಲೀಸ್ ಠಾಣೆ ಗುನ್ನೆ ನಂ. 69/2017 ಕಲಂ. 78(3) Karnataka Police Act.
ದಿನಾಂಕ 12-06-2017 ರಂದು ಸಾಯಾಂಕಾಲ 4:00 ಗಂಟೆಗೆ ಠಾಣಾದಲ್ಲಿದ್ದಾಗ  ನವಲಿ ಗ್ರಾಮದ ಮೇಗಳ ಆಂಜನಯ್ಯ ಗುಡಿಯ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಓ.ಸಿ.ಮಟಕಾ ನಡೆದಿದೆ ಅಂತಾ ಭಾತ್ಮಿ ಬಂದ ಮೇರೆಗೆ ಶ್ರೀ  ಶರಣಪ್ಪ ಎ.ಎಸ್.ಐ ರವರು ಪಂಚರು ಮತ್ತು ಸಿಬ್ಬಂದಿಯವರೊಂದಿಗೆ ನವಲಿ ಗ್ರಾಮದ ಮೇಗಳ ಆಂಜನಯ್ಯ ಗುಡಿಯ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಹೋಗಿ ನೋಡಲಾಗಿ, ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ.1 ಈತನು ಸಾರ್ವಜನಿಕರನ್ನು ಬರ ಮಾಡಿಕೊಂಡು ಅವರಿಗೆ 1 ರೂಪಾಯಿಗೆ 80 ರೂಪಾಯಿ ಬರುತ್ತದೇ ಬನ್ನೀ ನಸೀಬ ಜೂಜಾಟದ ಅಂತಾ ಕೂಗುತ್ತಾ ಸಾರ್ವಜನಿಕರನ್ನು ಬರ ಮಾಡಿಕೊಂಡು ಅವರಿಂದ ಹಣ ಪಡೆದು ಅವರಿಗೆ ಓ.ಸಿ. ನಂಬರಗಳನ್ನು ಬರೆದು ಕೊಡುತ್ತಿದ್ದಾಗ ಪಂಚರೊಂದಿಗೆ ದಾಳಿ ಮಾಡಲು ಆರೋಪಿತನಿಂದ 01 ಮಟಕಾ ಬರೆದ ಪಟ್ಟಿ, 1 ಬಾಲ್ ಪೆನ್ನು ನಗದು ಹಣ ರೂ.650/-00 ಸಿಕ್ಕಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
5] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ  ಗುನ್ನೆ ನಂ. 130/2017 ಕಲಂ. 78(3) Karnataka Police Act.
ದಿ:12-06-2017 ರಂದು ರಾತ್ರಿ 7-20 ಗಂಟೆಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ, ಗಿಣಿಗೇರಿ ಗ್ರಾಮದ ಶ್ರೀ ಆಂಜನೇಯ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ 1=00 ರೂ ಗೆ 80=00 ರೂಪಾಯಿಗಳನ್ನು ಕೊಡುತ್ತೇನೆ ಅಂತಾ ಕೂಗುತ್ತಾ ಜನರಿಂದ ಹಣ ಪಡೆದು ಮಟ್ಕಾ ನಂಬರ್ ಚೀಟಿ ಬರೆದು ಕೊಡುತ್ತಿದ್ದಾಗ ಶ್ರೀ ಗುರುರಾಜ ಕಟ್ಟಿಮನಿ,  ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ 810=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಹಾಗೂ ಒಂದು ಬಾಲಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈ ಗೊಂಡಿದ್ದು ಇರುತ್ತದೆ.
6] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ  ಗುನ್ನೆ ನಂ. 131/2017 ಕಲಂ. 78(3) Karnataka Police Act.
ದಿ:12-06-2017 ರಂದು ರಾತ್ರಿ 8-00 ಗಂಟೆಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ, ಗಿಣಿಗೇರಿ ಗ್ರಾಮದ ಗಂಗಾವತಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ 1=00 ರೂ ಗೆ 80=00 ರೂಪಾಯಿಗಳನ್ನು ಕೊಡುತ್ತೇನೆ ಅಂತಾ ಕೂಗುತ್ತಾ ಜನರಿಂದ ಹಣ ಪಡೆದು ಮಟ್ಕಾ ನಂಬರ್ ಚೀಟಿ ಬರೆದು ಕೊಡುತ್ತಿದ್ದಾಗ ಶ್ರೀ ಭೀಮಣ್ಣ. ಎಮ್. ಸೋರಿ ಸಿಪಿಐ ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ 1220=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಹಾಗೂ ಒಂದು ಬಾಲಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈ ಗೊಂಡಿದ್ದು ಇರುತ್ತದೆ.
7] ಸಂಚಾರಿ ಪೊಲೀಸ್ ಠಾಣೆ ಕೊಪ್ಪಳ  ಗುನ್ನೆ ನಂ. 25/2017 ಕಲಂ. 279, 336 ಐ.ಪಿ.ಸಿ:.

ದಿನಾಂಕ. 12-06-2017 ರಂದು ಸಂಜೆ 08-55 ಗಂಟೆಗೆ ಶ್ರೀ ಗಣೇಶ ಸಿ ಪಿ.ಎಸ್.ಐ-1 ಸಂಚಾರ ಪೊಲೀಸ್ ಠಾಣೆ ಕೊಪ್ಪಳ ರವರು ಠಾಣೆಗೆ ಹಾಜರಾಗಿ ಗಣಕೀರಣ ಮಾಡಿಸಿದ ಫಿರ್ಯಾಧಿಯನ್ನು ಹಾಜರು ಪಡಿಸಿದ್ದು ಅದರ ಸಾರಾಂಶವೆನೆಂದರೆ, ಇಂದು ದಿನಾಂಕ. 12-06-2017 ರಂದು ಫಿರ್ಯಾದುದಾರರು ಸಂಜೆ  06-00 ಗಂಟೆಗೆ ಕೊಪ್ಪಳ ನಗರದ ಗದಗ-ಹೊಸಪೇಟೆ ಎನ್.ಹೆಚ್.-63 ರಸ್ತೆಯ ಮೇಲೆ ತಿರುಮಲ್ ಹೋಟೆಲ್ ಮುಂದೆ ವಾಹನ ತಪಾಸಣೆ ಮಾಡುವಾಗ  ಸಂಜೆ 07-30 ಗಂಟೆಯ ಸಮಯದಲ್ಲಿ ಕೊಪ್ಪಳದ  ಕಡೆಯಿಂದ ಒಬ್ಬ ಟಾಟಾ ಮ್ಯಾಜಿಕ್ ವಾಹನದ ಚಾಲಕನು ತನ್ನ ವಾಹನದಲ್ಲಿ ಹೆಚ್ಚಿನ ಜನರನ್ನು ಕೂಡಿಸಿಕೊಂಡು ಹಾಗೂ ನಾಲ್ಕು ಜನರನ್ನು ಹಿಂದೆ  ಪೂಟ್ ಬೋರ್ಡ ಮೇಲೆ ನಿಲ್ಲಿಸಿಕೊಂಡು ಬಂದಿದ್ದು, ಇರುತ್ತದೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಕೊಂಡೆನು.

0 comments:

 
Will Smith Visitors
Since 01/02/2008