Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Sunday, June 4, 2017

1]  ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 132/2017 ಕಲಂ. 78(3) Karnataka Police Act.
ದಿನಾಂಕ: 03-06-2017 ರಂದು ಬೆಳಗ್ಗೆ 11-15 ಗಂಟೆಯ ಸುಮಾರಿಗೆ ನಾನು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿರುವಾಗ ಠಾಣಾ ವ್ಯಾಪ್ತಿಯ ಬರುವ ಗುಂಡೂರ್ ರಸ್ತೆಯ ದೇಸಾಯಿಕ್ಯಾಂಪಿನ ಕೇನಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದಿದ್ದು, ಶ್ರೀ ಪ್ರಕಾಶ. ಎಲ್. ಮಾಳಿ, ಪಿ.ಎಸ್.. ಠಾಣೆಯಲ್ಲಿ ಹಾಜರಿದ್ದ ಸಿಬ್ಬಂದಿಯವರಾದ ಪಿ.ಸಿ. ನಂ: 358, 80 ಇವರು ಮತ್ತು ಇಬ್ಬರು ಪಂಚರು ಕೂಡಿಕೊಂಡು ಮಾಹಿತಿ ಇದ್ದ ಪ್ರಕಾರ ಶ್ರೀರಾಮನಗರಕ್ಕೆ ಹೊಗಿ ಸ್ವಲ್ಪ ದೂರದಲ್ಲಿ ವಾಹನವನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ದೇಸಾಯಿಕ್ಯಾಂಪ್- ಗುಂಡೂರ್ ರಸ್ತೆಯ ಪಕ್ಕದಲ್ಲಿ ಕೆನಾಲ್ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿ ಹೊಗಿ ಬರುವ ಸಾರ್ವನಿಕರಿಗೆ ಕೂಗಿ ಕರೆದು 1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇವೆ ಅದೃಷ್ಟದ ಮಟಕಾ ಅಂಕಿಗಳ ಮೇಲೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗಿ ಜನರನ್ನು ಕರೆದು ಜನರಿಂದ ಹಣ ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಅದೃಷ್ಠದ ಮಟಕಾ ಜೂಜಾಟದಲ್ಲಿ ತೊಡಗಿದ್ದು, ಕೂಡಲೇ ಅವನ ಮೇಲೆ ದಾಳಿ ಮಾಡಲಾಗಿ ಮಟಕಾ ಪಟ್ಟಿ ಬರೆಯುತ್ತಿದ್ದವನನ್ನು ಹಿಡಿದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕವನ ಹೆಸರು ವಿಚಾರಿಸಲಾಗಿ ತನ್ನ ಹೆಸರು ಮಧುಸೂಧನ ತಂದಿ  ರಾಮಾಂಜನೇಯಲು  ಕೊಂಕಾ  ವಯಾ- 39 ವರ್ಷ ಜಾ- ಕಮ್ಮಾ ಸಾ- ವಾರ್ಡ ನಂ-2 ಶ್ರೀರಾಮನಗರ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 1900/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ಪೆನ್ನು ದೊರೆತಿದ್ದು ಇದೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.   
2] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 133/2017 ಕಲಂ. 87 Karnataka Police Act.
ದಿನಾಂಕ:- 03-06-2017 ರಂದು ಮಧ್ಯಾಹ್ನ 3:00 ನಾನು ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಡಾಣಾಪೂರು ಸೀಮಾದ ರೈಲ್ವೇ ಹಳಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಶ್ರೀ ಪ್ರಕಾಶ ಮಾಳಿ, ಪಿ.ಎಸ್.. ರವರಿಗೆ ಬಂದ ಮೇರೆಗೆ ಮಾನ್ಯ ಡಿ.ಎಸ್.ಪಿ. ಗಂಗಾವತಿ ಹಾಗೂ ಮಾನ್ಯ ಸಿ.ಪಿ..ರವರ ಮಾರ್ಗದರ್ಶನದಲ್ಲಿ ದಾಳಿ ಮಾಡಲು ಇಬ್ಬರು ಪಂಚರನ್ನು ಬರಮಾಡಿಕೊಂಡು ಸಂಗಡ ಇದ್ದ ಸಿಬ್ಬಂದಿಯವರಾದ ಹೆಚ್.ಸಿ- 173, 44, 167, 191, ಪಿ.ಸಿ. 110, 237, 354, 328, 131, 80, 363, 180, 335 ಹೊರಟು ಡಾಣಾಪೂರು ಸೀಮಾದಲ್ಲಿ ರೈಲ್ವೇ ಹಳಿಯಿಂದ   ಸ್ವಲ್ಪ ದೂರದಲ್ಲಿ ವಾಹನಗಳನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ರೈಲ್ವೆ ಹಳಿಯ ಹತ್ತಿರದ  ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ವಿಚಾರಿಸಲು ಅವರು ತಮ್ಮ ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 13 ಜನರು ಸಿಕ್ಕಿ ಬಿದ್ದಿದ್ದು, ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 21,300/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿದ್ದು ಇರುತ್ತದೆ.
3]  ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ. 102/2017 ಕಲಂ. 87 Karnataka Police Act.

ದಿನಾಂಕಃ-03-06-2017 ರಂದು ಸಾಯಂಕಾಲ 6-15 ಗಂಟೆಗೆ ಶ್ರೀ ದೀಪಕ್ ಆರ್. ಬೂಸರೆಡ್ಡಿ, ಸಿ.ಪಿ.ಐ ಗಂಗಾವತಿ ಗ್ರಾಮೀಣ ವೃತ್ತ ರವರು ಹಾಜರಾಗಿ ಒಂದು ಮೂಲ ಪಂಚನಾಮೆಯೊಂದಿಗೆ ಮಾನ್ಯ ನ್ಯಾಯಾಲಯದ ಅನುಮತಿ ಪತ್ರದೊಂದಿಗೆ ವರದಿಯನ್ನು ಹಾಜರುಪಡಿಸಿದ್ದು ಸಾರಾಂಶವೆನಂದರೆ, ಇಂದು ದಿನಾಂಕ 03-06-2017 ರಂದು ಸಾಯಂಕಾಲ 4-45 ಗಂಟೆಯ ಸುಮಾರಿಗೆ ಕಾರಟಗಿಯ ಅಮೃತ ಲಾಡ್ಝ ಹತ್ತಿರ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದ ಆರೋಪಿತರ ಮೇಲೆ ಸಿ.ಪಿ.ಐ ಸಾಹೇಬರು, ಪಿ.ಎಸ್.ಐ ಗಂಗಾವತಿ ಗ್ರಾಮಿಣ ಠಾಣೆ, .ಎಸ್.ಐ ಮಲ್ಲಪ್ಪ ಕಾರಟಗಿ ಮತ್ತು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷದಲ್ಲಿ ದಾಳಿ ಮಾಡಿದಾಗ ಆರೋಪಿ ನಂ-1 ರಿಂದಾ 10 ನೇದ್ದವರು ಸಿಕ್ಕಿಬಿದ್ದಿದ್ದು ಸದರ್ ಸಿಕ್ಕಿಬಿದ್ದಿರುವ ಆರೋಪಿತರ ವಶದಿಂದ 42850/- ರೂಗಳನ್ನು ವಶಪಡಿಸಿಕೊಂಡಿದ್ದು. ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ.

0 comments:

 
Will Smith Visitors
Since 01/02/2008