1] ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 162/2017 ಕಲಂ. 87
Karnataka Police Act.
ದಿ : 10-06-2017 ರಂದು 5-15 ಪಿ.ಎಮ್ ಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯ ಯಲಮಗೇರಿ ಗ್ರಾಮದ ಹೊಸ ಬಸ್
ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ದುಂಡಾಗಿ ಕುಳಿತು ಪಣಕ್ಕೆ ಹಣವನ್ನು ಹಚ್ಚಿ ಅಂದರ-ಬಾಹರ ಎಂಬ ಇಸ್ಪೇಟ್
ಜೂಜಾಟದಲ್ಲಿ ತೊಡಗಿದ್ದಾಗ ಪಿ.ಎಸ್,ಐ ರವರು ಸಿಬ್ಬಂದಿಯವರನ್ನು ಸಂಗಡ ಕರೆದುಕೊಂಡು
ಪಂಚರ ಸಮಕ್ಷಮ ದಾಳಿ ಮಾಡಿದ್ದು 03 ಜನರು ಸಿಕ್ಕಿಬಿದ್ದಿದ್ದು, ಸಿಕ್ಕಿಬಿದ್ದವರಿಂದ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, 1150=00 ರೂ, 52 ಇಸ್ಪೇಟ್ ಎಲೆ, ಒಂದು ಹಾಳೆಯ ಚೀಲ ಇವುಗಳನ್ನು
ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು ಸಿಕ್ಕ 03 ಜನ ಆರೋಪಿತರನ್ನು ವಶಕ್ಕೆ ತೆಗೆದುಕೊಂಡಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ಕ್ರಮ
ಜರುಗಿಸಿದ್ದು ಇರುತ್ತದೆ.
2] ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 92/2017 ಕಲಂ. 87 Karnataka Police
Act:
ಆರೋಪಿತರು ಆಡೂರು ಗ್ರಾಮದ ತೇರಿನ ಗಡ್ಡಿ ಸಮೀಪ ಆಲದ ಮರದ ಕೆಳಗಡೆ ಸಾರ್ವಜನಿಕ ಸ್ಥಳದಲ್ಲಿ
ದುಂಡಾಗಿ ಕುಳಿತುಕೊಂಡು ಪಣಕ್ಕೆ ಹಣ ಹಚ್ಚಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಎಂಬ ಜೂಜಾಟದಲ್ಲಿ
ತೊಡಗಿದ್ದಾಗ ಅವರ ಮೇಲೆ ದಾಳಿ ಮಾಡಿದ್ದು, ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್ ಮತ್ತು 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ
ನಗದು ಹಣ 2420=00 ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಆರೋಪಿತರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ವರದಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
3] ಮುನಿರಾಬಾದ ಪೊಲೀಸ್ ಠಾಣೆ ಗುನ್ನೆ ನಂ. 186/2017 ಕಲಂ. 279, 337 ಐ.ಪಿ.ಸಿ:.
ದಿನಾಂಕ 10-07-2017 ರಂದು ರಾತ್ರಿ 8-30 ಗಂಟೆ ಸುಮಾರಿಗೆ ಪಿರ್ಯಾದುದಾರರು
ಠಾಣೆಗೆ ಹಾಜಾರಿ ಗಣಕೀಕೃತ ಪಿರ್ಯಾದಿಯನ್ನು ನೀಡಿದ್ದು ಅದರಲ್ಲಿ ದಿನಾಂಕ: 09-07-2017 ರಂದು ರಾತ್ರಿ 10-00 ಗಂಟೆ ಸುಮಾರಿಗೆ ಗಾಯಾಳು ಜಬ್ಬರಸಿಂಗ್ ತಂದೆ ಕಿಶನಾರಾಮ ಇತನು ತನ್ನ ಮೋಟರ ಸೈಕಲ್ ನಂ. ಕೆಎ-20/ಜೆ-6296 ನೇದ್ದರಲ್ಲಿ ಕಲ್ಯಾಣಿ ಪ್ಯಾಕ್ಟರಿಯಿಂದ ಹೊಸನಿಂಗಾಪೂರ ಗ್ರಾಮಕ್ಕೆ ಕೊಪ್ಪಳ-ಹೊಸಪೇಟೆ ಎನ್.ಎಚ್-63 ರಸ್ತೆಯ ಮೇಲೆ ಬೇವಿನಹಳ್ಳಿ ಕ್ರಾಸ್ ಹತ್ತಿರ ಬರುತ್ತಿರುವಾಗ ಹಿಂದಿನಿಂದ ಆರೋಪಿತನು ತನ್ನ ಕಾರ ನಂ. ಕೆಎ-25/ಪಿ-8033 ನೇದ್ದನ್ನು ಅತೀ ವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮೋಟರ ಸೈಕಲಗೆ ಡಿಕ್ಕಿ ಪಡಿಸಿ ಅಪಘಾತ ಪಡಿಸಿರುತ್ತಾನೆ. ಇದರಿಂದಾಗಿ ಜಬ್ಬರಸಿಂಗ್ ಇತನ ತಲೆಗೆ, ಎರಡು ಕೈಗಳು, ಎರಡು ಕಾಲುಗಳು ರಕ್ತಗಾಯಗಳಾಗಿರುತ್ತವೆ ಎಂದು ಮುಂತಾಗಿ ಇದ್ದ ಪಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
0 comments:
Post a Comment