Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Sunday, October 22, 2017

1] ಯಲಬು‍ರ್ಗಾ ಪೊಲೀಸ್  ಠಾಣೆ  ಗುನ್ನೆ ನಂ. 141/2017 ಕಲಂ. 87 Karnataka Police Act.
ದಿನಾಂಕ: 21-10-2017 ರಂದು ಮಧ್ಯಾಹ್ನ 12-30 ಗಂಟೆಗೆ ಸುಮಾರಿಗೆ ಆರೋಪಿತರು ವಜ್ರಬಂಡಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಇಸ್ಪೀಟ ಎಲೆಗಳ ಸಹಾಯದಿಂದ ಅಂದರ-ಬಾಹರ ಎಂಬ ನಸೀಬ ಜೂಜಾಟದಲ್ಲಿ ತೊಡಗಿದ್ದಾಗ ಫಿರ್ಯಾದಿದಾರರು ಸಿಬ್ಬಂದಿ ಮತ್ತು ಪಂಚರೊಂದಿಗೆ ದಾಳಿ ಮಾಡಿದ್ದು, 9 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸಿಕ್ಕಿ ಬಿದ್ದ ಆರೋಪಿತರ ಹತ್ತಿರ ಮತ್ತು ಕಣದಲ್ಲಿದ್ದ ಒಟ್ಟು 15,030=00 ರೂಪಾಯಿ ನಗದು ಹಣ, 52 ಇಸ್ಪೀಟ ಎಲೆಗಳು ಅಂ.ಕಿ. ಇಲ್ಲ ಮತ್ತು ಒಂದು ಪ್ಲಾಸ್ಟೀಕ ಬರ್ಕಾ ಅಂ.ಕಿ. ಇಲ್ಲ ಇವುಗಳು ಸಿಕ್ಕಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಅದೆ.
2] ಮುನಿರಾಬಾದ  ಪೊಲೀಸ್  ಠಾಣೆ  ಗುನ್ನೆ ನಂ. 274/2017 ಕಲಂ. 87 Karnataka Police Act.
ದಿನಾಂಕ 21-10-2017 ರಂದು 11-15 ಎ.ಎಂ.ಕ್ಕೆ ಆರೋಪಿತರು ಇಂದರಗಿ ಗ್ರಾಮದ ದುರಗಮ್ಮನ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಜಯಪ್ರಕಾಶ ಪಿ.ಎಸ್.ಐ ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ದಾಳಿ ಮಾಡಿ ಹಿಡಿದಿದ್ದು, ಆ ಕಾಲಕ್ಕೆ 13 ಜನ ಆರೋಪಿತರು ಸಿಕ್ಕಿದ್ದು, ಸದರಿಯವರಿಂದ 52 ಇಸ್ಪೇಟ ಎಲೆಗಳು, 1 ಹಳೆ ಬರಕಾ ಹಾಗೂ 2590-00 ರೂ. ನಗದು ಹಣ ಸಿಕ್ಕಿರುತ್ತವೆ ಎಂದು ಮುಂತಾಗಿದ್ದ ಫಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈ ಗೊಂಡಿರುತ್ತಾರೆ.           
3] ಕುಕನೂರ ಪೊಲೀಸ್  ಠಾಣೆ  ಗುನ್ನೆ ನಂ. 143/2017 ಕಲಂ. 87 Karnataka Police Act.
ದಿನಾಂಕ:20-10-2017 ರಂದು ಮದ್ಯಾಹ್ನ 3-00 ಗಂಟೆ ಸುಮಾರಿಗೆ ಆರೋಪಿತರು ಬಳಗೇರಿ ಗ್ರಾಮದ ಕಾಳಮ್ಮ ದೇವಿ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 03 ಜನರು ದುಂಡಾಗಿ ಕುಳಿತುಕೊಂಡು ಪಣಕ್ಕೆ ಹಣ ಹಚ್ಚಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಎಂಬ ಜೂಜಾಟದಲ್ಲಿ ತೊಡಗಿದ್ದಾಗ ಅವರ ಮೇಲೆ ಶ್ರೀ. ಚಂದ್ರಹಾಸ ಪಿ.ಎಸ್.ಐ. ಹಾಗೂ ಸಿಬ್ಬಂದಿಯರು ಸೇರಿ ದಾಳಿ ಮಾಡಿ ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಪ್ಲಾಸ್ಟಿಕ್ ಬರಕಾ ಮತ್ತು 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 3150=00 ರೂ.ಗಳನ್ನು ಜಪ್ತ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
4] ಕುಕನೂರ ಪೊಲೀಸ್  ಠಾಣೆ  ಗುನ್ನೆ ನಂ. 144/2017 ಕಲಂ. 87 Karnataka Police Act.
ದಿನಾಂಕ:20-10-2017 ರಂದು ಸಾಯಂಕಾಲ 5-45 ಗಂಟೆ ಸುಮಾರಿಗೆ ಆರೋಪಿತರು ಯಡಿಯಾಪೂರ ಗ್ರಾಮದ ಬಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನರು ದುಂಡಾಗಿ ಕುಳಿತುಕೊಂಡು ಪಣಕ್ಕೆ ಹಣ ಹಚ್ಚಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಎಂಬ ಜೂಜಾಟದಲ್ಲಿ ತೊಡಗಿದ್ದಾಗ ಅವರ ಮೇಲೆ ಶ್ರೀ. ಚಂದ್ರಹಾಸ ಪಿ.ಎಸ್.ಐ. ಹಾಗೂ ಸಿಬ್ಬಂದಿಯರು ದಾಳಿ ಮಾಡಿ ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಪ್ಲಾಸ್ಟಿಕ್ ಬರಕಾ ಮತ್ತು 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 8840=00 ರೂ.ಗಳನ್ನು ಜಪ್ತ ಪಡಿಸಿಕೊಂಡು ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದು ಆರೋಪಿತರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ವರದಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
5] ಕುಕನೂರ ಪೊಲೀಸ್  ಠಾಣೆ  ಗುನ್ನೆ ನಂ. 145/2017 ಕಲಂ. 87 Karnataka Police Act.
ದಿನಾಂಕ:20-10-2017 ರಂದು ರಾತ್ರಿ 8-30 ಗಂಟೆ ಸುಮಾರಿಗೆ ಆರೋಪಿತರು ತಳಕಲ್ ಗ್ರಾಮದ ಫಕೀರ ಸ್ವಾಮಿ ದರ್ಗಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 04 ಜನರು ದುಂಡಾಗಿ ಕುಳಿತುಕೊಂಡು ಪಣಕ್ಕೆ ಹಣ ಹಚ್ಚಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಎಂಬ ಜೂಜಾಟದಲ್ಲಿ ತೊಡಗಿದ್ದಾಗ ಅವರ ಮೇಲೆ ಶ್ರೀ. ಚಂದ್ರಹಾಸ ಪಿ.ಎಸ್.ಐ. ಹಾಗೂ ಸಿಬ್ಬಂದಿಯರು ದಾಳಿ ಮಾಡಿ ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತರಿಂದ ಹಾಗೂ ಜೂಜಾಟದ ಕಣದಿಂದ ಒಂದು ಪ್ಲಾಸ್ಟಿಕ್ ಬರಕಾ ಮತ್ತು 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 6340=00 ರೂ.ಗಳನ್ನು ಜಪ್ತ ಪಡಿಸಿಕೊಂಡು ಈ ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದು ಆರೋಪಿತರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ವರದಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
6]  ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 237/2017 ಕಲಂ. 87 Karnataka Police Act.
ದಿನಾಂಕ: 21-10-2017 ರಂದು 16-30 ಗಂಟೆಗೆ ಆರೋಪಿತರು ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಎಲ್.ಐ.ಸಿ. ಆಫೀಸ್ ಎದುರುಗಡೆಗೆ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ಕಾಮಣ್ಣ ಎ.ಎಸ್.ಐ ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 11,710-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
7] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 238/2017 ಕಲಂ. 87 Karnataka Police Act.

ದಿನಾಂಕ: 21-10-2017 ರಂದು 16-45 ಗಂಟೆಗೆ ಆರೋಪಿತರು ಗಂಗಾವತಿ ನಗರದ ಬಸ್ ಸ್ಟ್ಯಾಂಡ್ ರಸ್ತೆಯ ಸತ್ಕಾರ ಡಿಲೆಕ್ಸ್ ಲಾಡ್ಜ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ಮಹಾಕೂಟೇಶ ಎ.ಎಸ್.ಐ ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 28,490-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008