Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Tuesday, November 7, 2017

1] ಕೊಪ್ಪಳ ನಗರ ಪೊಲೀಸ್  ಠಾಣೆ  ಗುನ್ನೆ ನಂ. 168/2017  ಕಲಂ. 78(3) Karnataka Police Act.
ದಿ: 06-11-2017 ರಂದು ಸಂಜೆ 6-30 ಗಂಟೆಗೆ ಠಾಣಾ ವ್ಯಾಪ್ತಿಯ ಭಾಗ್ಯನಗರದ ಪಾಂಡುರಂಗ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ರಾಮಚಂದ್ರಸಾ ಈತನು ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಜನರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಾಮಪ್ಪ ಎ.ಎಸ್.ಐ. ಪಂಚರೊಂದಿಗೆ ಸಿಬ್ಬಂದಿಗಳ ಸಂಗಡ ದಾಳಿ ಮಾಡಿ ಆರೋಪಿತನಿಗೆ ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನಿಂದ ನಗದು ಹಣ ರೂ 2600=00 ರೂ, ಮಟಕಾ ನಂಬರ ಬರೆದ ಒಂದು ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿದ್ದು, ಸದರಿ ಆರೋಪಿತನನ್ನು ವಿಚಾರಿಸಿದಾಗ ತಾನು ಬರೆದ ಮಟ್ಕಾ ಪಟ್ಟಿಯನ್ನು ರವಿಕುಮಾರ ಸಾ: ಗದಗ ಇತನಿಗೆ ಕೋಡುವುದಾಗಿ ತಿಳಿಸಿರುತ್ತಾನೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಅದೆ.
2] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 253/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 5-15 ಪಿ.ಎಮ್ ಗಂಟೆಯ ಸುಮಾರಿಗೆ ಆರೋಪಿ ವೆಂಕಟೇಶ ತಂದೆ ನಾರಾಯಣಪ್ಪ ವಯಾ: 55 ವರ್ಷ, ಜಾ: ಈಡಿಗ, ಉ: ಟೈಲರ್ ಕೆಲಸ, ಸಾ: ಗುಂಡಮ್ಮ ಕ್ಯಾಂಪ್ ಗಂಗಾವತಿ ಇವನು ಗಂಗಾವತಿ ನಗರದ ಕರ್ನೂಲ್ ಬಾಬಾ ದರ್ಗಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 190-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
3] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 254/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 7-15 ಪಿ.ಎಮ್ ಗಂಟೆಯ ಸುಮಾರಿಗೆ ಉಸ್ಮಾನಬೇಗ್ ತಂದೆ ಮಹ್ಮದ ಬೇಗ್ ವಯಸ್ಸು 62 ವರ್ಷ ಸಾ: ಲಕ್ಷ್ಮೀಕ್ಯಾಂಪ್, ಗಂಗಾವತಿ ಇವನು ಗಂಗಾವತಿ ನಗರದ ಎಲ್.ಐ.ಸಿ. ಆಫೀಸ್ ಹಿಂದುಗಡೆಗೆ ಲಕ್ಷ್ಮೀಕ್ಯಾಂಪ್ ಗೆ ಹೋಗುವ ರಸ್ತೆಯಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 320-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
4] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 255/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 9-15 ಪಿ.ಎಮ್ ಗಂಟೆಯ ಸುಮಾರಿಗೆ ಆರೋಪಿ ಖಾಜಾಪಾಷ ತಂದೆ ಮುಸ್ತಫಾ ವಯಸ್ಸು 31 ವರ್ಷ ಜಾ: ಮುಸ್ಲಿಂ ಉ: ಹೋಟೆಲ್ ಕೆಲಸ ಸಾ: ಅಂಬೇಡ್ಕರ್ ನಗರ, ಗಂಗಾವತಿ ಇವನು ಗಂಗಾವತಿ ನಗರದ ಮಹಾವೀರ ಸರ್ಕಲ್ ದ ಸಾದಿಕ್ ಟೀ ಸ್ಟಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 260-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
5] ಗಂಗಾವತಿ ಗ್ರಾಮೀಣ  ಪೊಲೀಸ್  ಠಾಣೆ  ಗುನ್ನೆ ನಂ. 334/2017  ಕಲಂ. 279, 337, 338 ಐ.ಪಿ.ಸಿ:.
ದಿನಾಂಕ. 06-11-2017 ರಂದು ರಾತ್ರಿ 08-20 ಗಂಟೆಗೆ ಫಿರ್ಯಾದಿದಾರ ತಿರುಪತಿ ತಂದೆ ಮರಿಯಪ್ಪ ಚಳ್ಳೂರ  ತಮ್ಮ ಮನೆಯ ಮುಂದೆ ಗಂಗಾವತಿ ಕನಕಗಿರಿ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ದುರುಗಪ್ಪ ಕೊಟ್ಟನಕಲ್ ಈತನು ತನ್ನ ಮೋಟಾರ ಸೈಕಲ್ ನಂ. ಕೆ.ಎ.35/ಕೆ.4206 ನೇದ್ದರಲ್ಲಿ ಹಿಂದೆ ನಿಂಗಪ್ಪ ತಂದೆ ನಾಗಪ್ಪ ಸಾ. ಕಲಿಕೇರಿ ಇತನಿಗೆ ಕೂಡಿಸಿಕೊಂಡು ಮೋಟಾರ ಸೈಕಲನ್ನು ಅತಿವೇಗವಾಗಿ ಅಜಾಗರುಕತೆಯಿಂದ ಅಡ್ಡಾದಿಡ್ಡಿ ಚಲಾಯಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿದ್ದ ಫಿರ್ಯಾದಿಗೆ ಡಿಕ್ಕಿ ಕೊಟ್ಟು ಅಪಘಾತ ಮಾಡಿ ನಂತರ ತಾವು ಕೂಡಾ ಮೋಟಾರ ಸೈಕಲ ಸಮೇತ ಬಿದ್ದು ಮೋಟಾರ ಸೈಕಲ ಚಾಲಕ ದುರುಗಪ್ಪನಿಗೆ ಮತ್ತು ಹಿಂದೆ ಕುಳಿತ ನಿಂಗಪ್ಪನಿಗೆ ಹಾಗೂ ಫಿರ್ಯಾದಿಗೆ ಗಾಯ ಪೆಟ್ಟುಗಳಾಗಿದ್ದು ಅಲ್ಲದೆ ದುರುಗಪ್ಪನಿಗೆ ತಲೆಗೆ ಪೆಟ್ಟು ಬಿದ್ದು ಮಾತನಾಡುವ ಸ್ಥಿತಿಯಲ್ಲಿ ಇರುವದಿಲ್ಲಾ ಅಂತಾ ಮುಂತಾಗಿದ್ದ ಫಿರ್ಯಾದಿ ಪಡೆದುಕೊಂಡು ಪ್ರಕರಣ ದಾಖಲು ಮಾಡಿ ತನಿಖೆ ಕೈ ಗೊಳ್ಳಲಾಗಿದೆ.
6] ಗಂಗಾವತಿ ಗ್ರಾಮೀಣ  ಪೊಲೀಸ್  ಠಾಣೆ  ಗುನ್ನೆ ನಂ. 335/2017  ಕಲಂ. 87 Karnataka Police Act.

ದಿನಾಂಕ:- 06-11-2017 ರಂದು ರಾತ್ರಿ 11-00 ಗಂಟೆಗೆ ಶ್ರೀ ಪ್ರಕಾಶ ಮಾಳಿ ಪಿ.ಎಸ್.ಐ ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಣವಾಳ ಗ್ರಾಮದ ಶರಣಬಸವೇಶ‍್ವರ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಯವರಾದ ಹೆಚ್.ಸಿ. 106, 200, 191 ಪಿ.ಸಿ. 131, 180, 363, ಎ.ಪಿ.ಸಿ 15  ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಶರಣಬಸವೇಶ್ವರ ಗುಡಿ ಮುಂದೆ ಗುಡಿಯ ಲೈಟಿನ ಬೆಳಕಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಆಗ ಸಮಯ ರಾತ್ರಿ 11:45 ಗಂಟೆಯಾಗಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 34 ಜನರು ಸಿಕ್ಕಿ ಬಿದ್ದಿದ್ದು ಇರುತ್ತದೆ.  ಸದರಿ ದಾಳಿಯಲ್ಲಿ ಸಿಕ್ಕ 34 ಜನರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 50,220/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008